<p><strong>ಯಳಂದೂರು:</strong>ತಾಲ್ಲೂಕಿನ ದುಗ್ಗಹಟ್ಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ರೈತ ದಂಪತಿಗೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ<br />ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ನಿವೇಶನಕ್ಕಾಗಿಜಮೀನು ಬಿಟ್ಟು ಕೊಡಲು ಒಪ್ಪದೇ ಇದ್ದುದಕ್ಕೆ ಯಜಮಾನರು ಬಹಿಷ್ಕಾರ ಹಾಕಿದ್ದಾರೆ ಎಂದು ಗ್ರಾಮದ ಸರೋಜಮ್ಮ–ನಂಜುಂಡಸ್ವಾಮಿ ದಂಪತಿ ದೂರಿದ್ದಾರೆ.ದಂಪತಿ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದು, ಅವರು ಈ ಬಗ್ಗೆ ವಿಚಾರಣೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.</p>.<p>'ನನ್ನ ಒಡೆತನದ 1 ಎಕರೆ 1 ಗುಂಟೆ ಜಮೀನನ್ನು ಗ್ರಾಮದ ಯಜಮಾನರು ನಿವೇಶನವಾಗಿ ಪರಿವರ್ತಿಸಲು ಬೇಡಿಕೆ ಇಟ್ಟಿದ್ದರು. ಇದಕ್ಕೆ<br />ಒಪ್ಪದಿದ್ದಾಗ ಗ್ರಾಮದ ಚರಂಡಿ ನೀರನ್ನು ಕೃಷಿ ಭೂಮಿಗೆ ತುಂಬಿಸಿ, ಅನಾರೋಗ್ಯಕ್ಕೆಕಾರಣರಾಗಿದ್ದಾರೆ. ನನಗೆ ದೇವಾಲಯದ ಮಾರಮ್ಮ ದೇವರ ತೀರ್ಥವನ್ನು ನೀಡುತ್ತಿಲ್ಲ. ಮಕ್ಕಳನ್ನುಯಾರು ಮಾತನಾಡಿಸುತ್ತಿಲ್ಲ. ಇದರಿಂದ ಬದುಕುವುದೇ ಕಷ್ಟವಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದೇವೆ' ಎಂದು ನಂಜುಂಡಯ್ಯ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.</p>.<p>ಊರಿನ ಯಜಮಾನರು ಆರೋಪ ನಿರಾಕರಿಸಿದ್ದಾರೆ. ‘ನಂಜುಂಡಸ್ವಾಮಿ ಅವರು ತಮ್ಮ ಜಮೀನಿನ ಬಳಿಯ ಚರಂಡಿಯನ್ನು ಮುಚ್ಚಿಕೊಂಡಿದ್ದಾರೆ. ಜಮೀನು ವಿವಾದ ಬೇಗಬಗೆ ಹರಿಯಲಿ ಎಂಬ ಉದ್ಧೇಶದಿಂದ ಇಂತಹ ಕತೆಗಳನ್ನು ಸೃಷ್ಟಿಸಿದ್ದಾರೆ. ಸಾಮಾಜಿಕ ಬಹಿಷ್ಕಾರ, ದಂಡ ಹಾಕಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ದೂರಿನ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಬಿ.ಕೆ.ಸುದರ್ಶನ್ ಅವರು, ‘ಸಂತ್ರಸ್ತರು ಕಚೇರಿಗೆ ಬಂದು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಹೇಳಿದ್ದಾರೆ. ಇದರ ಬಗ್ಗೆ ವಿಚಾರಣೆ ನಡೆಸುವಂತೆ ಪೊಲೀಸರಿಗೆ ತಿಳಿಸಲಾಗಿದೆ’ ಎಂದರು.</p>.<p>‘ಯಜಮಾನರನ್ನುಕರೆಸಿ ವಿಚಾರಣೆ ನಡೆಸಿದ್ದೇವೆ. 2015ರಲ್ಲಿ ನಡೆದಿದ್ದ ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ವಿವಾದ ಈಗ ಮರುಕಳಿಸಿದೆ. ಸಾಮಾಜಿಕ ಬಹಿಷ್ಕಾರ ಹಾಕಿಲ್ಲ ಎಂದು ಯಜಮಾನರು ತಿಳಿಸಿದ್ದಾರೆ.ದೂರುದಾರ ವಿಚಾರಣೆಗೆ ಹಾಜರಾಗಿಲ್ಲ’ ಎಂದು ಪಟ್ಟಣ ಠಾಣೆಸಬ್ ಇನ್ಸ್ಪೆಕ್ಟರ್ ಕರಿಬಸಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong>ತಾಲ್ಲೂಕಿನ ದುಗ್ಗಹಟ್ಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ರೈತ ದಂಪತಿಗೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ<br />ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ನಿವೇಶನಕ್ಕಾಗಿಜಮೀನು ಬಿಟ್ಟು ಕೊಡಲು ಒಪ್ಪದೇ ಇದ್ದುದಕ್ಕೆ ಯಜಮಾನರು ಬಹಿಷ್ಕಾರ ಹಾಕಿದ್ದಾರೆ ಎಂದು ಗ್ರಾಮದ ಸರೋಜಮ್ಮ–ನಂಜುಂಡಸ್ವಾಮಿ ದಂಪತಿ ದೂರಿದ್ದಾರೆ.ದಂಪತಿ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದು, ಅವರು ಈ ಬಗ್ಗೆ ವಿಚಾರಣೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.</p>.<p>'ನನ್ನ ಒಡೆತನದ 1 ಎಕರೆ 1 ಗುಂಟೆ ಜಮೀನನ್ನು ಗ್ರಾಮದ ಯಜಮಾನರು ನಿವೇಶನವಾಗಿ ಪರಿವರ್ತಿಸಲು ಬೇಡಿಕೆ ಇಟ್ಟಿದ್ದರು. ಇದಕ್ಕೆ<br />ಒಪ್ಪದಿದ್ದಾಗ ಗ್ರಾಮದ ಚರಂಡಿ ನೀರನ್ನು ಕೃಷಿ ಭೂಮಿಗೆ ತುಂಬಿಸಿ, ಅನಾರೋಗ್ಯಕ್ಕೆಕಾರಣರಾಗಿದ್ದಾರೆ. ನನಗೆ ದೇವಾಲಯದ ಮಾರಮ್ಮ ದೇವರ ತೀರ್ಥವನ್ನು ನೀಡುತ್ತಿಲ್ಲ. ಮಕ್ಕಳನ್ನುಯಾರು ಮಾತನಾಡಿಸುತ್ತಿಲ್ಲ. ಇದರಿಂದ ಬದುಕುವುದೇ ಕಷ್ಟವಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದೇವೆ' ಎಂದು ನಂಜುಂಡಯ್ಯ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.</p>.<p>ಊರಿನ ಯಜಮಾನರು ಆರೋಪ ನಿರಾಕರಿಸಿದ್ದಾರೆ. ‘ನಂಜುಂಡಸ್ವಾಮಿ ಅವರು ತಮ್ಮ ಜಮೀನಿನ ಬಳಿಯ ಚರಂಡಿಯನ್ನು ಮುಚ್ಚಿಕೊಂಡಿದ್ದಾರೆ. ಜಮೀನು ವಿವಾದ ಬೇಗಬಗೆ ಹರಿಯಲಿ ಎಂಬ ಉದ್ಧೇಶದಿಂದ ಇಂತಹ ಕತೆಗಳನ್ನು ಸೃಷ್ಟಿಸಿದ್ದಾರೆ. ಸಾಮಾಜಿಕ ಬಹಿಷ್ಕಾರ, ದಂಡ ಹಾಕಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ದೂರಿನ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಬಿ.ಕೆ.ಸುದರ್ಶನ್ ಅವರು, ‘ಸಂತ್ರಸ್ತರು ಕಚೇರಿಗೆ ಬಂದು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಹೇಳಿದ್ದಾರೆ. ಇದರ ಬಗ್ಗೆ ವಿಚಾರಣೆ ನಡೆಸುವಂತೆ ಪೊಲೀಸರಿಗೆ ತಿಳಿಸಲಾಗಿದೆ’ ಎಂದರು.</p>.<p>‘ಯಜಮಾನರನ್ನುಕರೆಸಿ ವಿಚಾರಣೆ ನಡೆಸಿದ್ದೇವೆ. 2015ರಲ್ಲಿ ನಡೆದಿದ್ದ ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ವಿವಾದ ಈಗ ಮರುಕಳಿಸಿದೆ. ಸಾಮಾಜಿಕ ಬಹಿಷ್ಕಾರ ಹಾಕಿಲ್ಲ ಎಂದು ಯಜಮಾನರು ತಿಳಿಸಿದ್ದಾರೆ.ದೂರುದಾರ ವಿಚಾರಣೆಗೆ ಹಾಜರಾಗಿಲ್ಲ’ ಎಂದು ಪಟ್ಟಣ ಠಾಣೆಸಬ್ ಇನ್ಸ್ಪೆಕ್ಟರ್ ಕರಿಬಸಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>