ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

181ಕ್ಕೆ ಇಳಿದ ಸಕ್ರಿಯ ಪ್ರಕರಣ

Last Updated 17 ಆಗಸ್ಟ್ 2021, 1:29 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆಯ ಅಬ್ಬರ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 200ಕ್ಕಿಂತ ಕೆಳಗೆ ಇಳಿದಿದೆ.

ಸೋಮವಾರ ಹೊಸದಾಗಿ 10 ಮಂದಿಗೆ ಕೋವಿಡ್‌ ದೃಢಪಟ್ಟು, 34 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿರುವ ಸೋಂಕಿತರ ಸಂಖ್ಯೆ 181ಕ್ಕೆ ಇಳಿದಿದೆ.ಸಾವು ಸಂಭವಿಸಿಲ್ಲ.

ಸೋಂಕಿತರ ಪೈಕಿ ಆರು ಮಂದಿ ಐಸಿಯುನಲ್ಲಿದ್ದಾರೆ. 35 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆ, ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಈ ವರೆಗೆ 32,220 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 31,508 ಮಂದಿ ಗುಣಮುಖರಾಗಿದ್ದಾರೆ.

ಸೋಮವಾರ 1,036 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,026 ಮಂದಿಯ ವರದಿ ನೆಗೆಟಿವ್ ಬಂದಿವೆ. 10 ಮಂದಿಗೆ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT