ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದಂಕಿಗೆ ಇಳಿದ ಸಕ್ರಿಯ ಪ್ರಕರಣ

Last Updated 1 ನವೆಂಬರ್ 2021, 16:04 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಕೋವಿಡ್‌ ಪ್ರಕರಣ ವರದಿಯಾಗಿಲ್ಲ. ನಾಲ್ವರು ಗುಣಮುಖರಾಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿರುವ ಸೋಂಕಿತರ ಸಂಖ್ಯೆ ಒಂದಂಕಿಗೆ ಇಳಿದಿದೆ.

ಎರಡನೇ ಅಲೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 10ರೊಳಕ್ಕೆ ಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ ಏಳು ಮಂದಿ ಸೋಂಕಿತರಿದ್ದಾರೆ. ಈ ಪೈಕಿ ಒಬ್ಬರು ಮಾತ್ರ ಆಸ್ಪತ್ರೆಯಲ್ಲಿದ್ದು, ಆರು ಮಂದಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ 942 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದೆ. ಎಲ್ಲರ ವರದಿಗಳೂ ನೆಗೆಟಿವ್‌ ಆಗಿವೆ.

ಜಿಲ್ಲೆಯಲ್ಲಿ ಇದುವರೆಗೆ 32,560 ಪ್ರಕರಣ ವರದಿಯಾಗಿವೆ. ಗುಣಮುಖರಾದವರ ಸಂಖ್ಯೆ 32,014ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT