ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

300ರ ಕೆಳಗಿಳಿದ ಸಕ್ರಿಯ ಪ್ರಕರಣ

Last Updated 18 ಜುಲೈ 2021, 4:47 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 26 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 40 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ಸಕ್ರಿಯ ಪ‍್ರಕರಣಗಳ ಸಂಖ್ಯೆ 300ರಿಂದ ಕೆಳಗೆ ಇಳಿದಿದೆ. ಸದ್ಯ 292 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 15 ಮಂದಿ ಐಸಿಯುನಲ್ಲಿ, ಏಳು ಜನರು ಹೋಂ ಐಸೊಲೇಷನ್‌ನಲ್ಲಿ ಹಾಗೂ ಉಳಿದವರು ಕೋವಿಡ್‌ ಕೇರ್‌ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,509ಕ್ಕೆ ಹಿಗ್ಗಿದೆ. 30,696 ಮಂದಿ ಗುಣಮುಖರಾಗಿದ್ದಾರೆ.

ಶನಿವಾರ 1,410 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,390 ವರದಿಗಳು ನೆಗೆಟಿವ್‌ ಬಂದಿವೆ. 20 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 16 ಪ್ರಕರಣಗಳನ್ನಷ್ಟೇ ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

16 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ ಆರು, ಗುಂಡ್ಲುಪೇಟೆಯ ಒಬ್ಬರು, ಕೊಳ್ಳೇಗಾಲದ ಮೂವರು, ಹನೂರಿನ ನಾಲ್ಕು ಮತ್ತು ಯಳಂದೂರು ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಇದ್ದಾರೆ.

ಗುಣಮುಖರಾದ 40 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 16, ಗುಂಡ್ಲುಪೇಟೆಯ ಇಬ್ಬರು, ಕೊಳ್ಳೇಗಾಲದ ಆರು, ಹನೂರಿನ 15 ಹಾಗೂ ಯಳಂದೂರಿನ ಐವರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT