ಮಂಗಳವಾರ, ಮಾರ್ಚ್ 28, 2023
32 °C

300ರ ಕೆಳಗಿಳಿದ ಸಕ್ರಿಯ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 26 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 40 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. 

ಸಕ್ರಿಯ ಪ‍್ರಕರಣಗಳ ಸಂಖ್ಯೆ 300ರಿಂದ ಕೆಳಗೆ ಇಳಿದಿದೆ. ಸದ್ಯ 292 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 15 ಮಂದಿ ಐಸಿಯುನಲ್ಲಿ, ಏಳು ಜನರು ಹೋಂ ಐಸೊಲೇಷನ್‌ನಲ್ಲಿ ಹಾಗೂ ಉಳಿದವರು ಕೋವಿಡ್‌ ಕೇರ್‌ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,509ಕ್ಕೆ ಹಿಗ್ಗಿದೆ. 30,696 ಮಂದಿ ಗುಣಮುಖರಾಗಿದ್ದಾರೆ. 

ಶನಿವಾರ 1,410 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 1,390 ವರದಿಗಳು ನೆಗೆಟಿವ್‌ ಬಂದಿವೆ. 20 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 16 ಪ್ರಕರಣಗಳನ್ನಷ್ಟೇ ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. 

16 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ ಆರು, ಗುಂಡ್ಲುಪೇಟೆಯ ಒಬ್ಬರು, ಕೊಳ್ಳೇಗಾಲದ ಮೂವರು, ಹನೂರಿನ ನಾಲ್ಕು ಮತ್ತು ಯಳಂದೂರು ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಇದ್ದಾರೆ.  

ಗುಣಮುಖರಾದ 40 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 16, ಗುಂಡ್ಲುಪೇಟೆಯ ಇಬ್ಬರು, ಕೊಳ್ಳೇಗಾಲದ ಆರು, ಹನೂರಿನ 15 ಹಾಗೂ ಯಳಂದೂರಿನ ಐವರು ಇದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.