ಭಾನುವಾರ, 11 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ಕ್ಕೆ ಇಳಿದ ಸಕ್ರಿಯ ಪ್ರಕರಣ

Last Updated 12 ಅಕ್ಟೋಬರ್ 2021, 1:09 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 1,057 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಗುಂಡ್ಲುಪೇಟೆ ಹಾಗೂ ಹನೂರಿನ ತಲಾ ಒಬ್ಬರಿಗೆ ಕೊರೊನಾ ವೈರಸ್‌ ತಗುಲಿರುವುದು ದೃಢಪಟ್ಟಿದೆ. ನಾಲ್ವರುಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ 18ಕ್ಕೆ ಕುಸಿದಿದೆ. ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ. ಹೋಂ ಐಸೊಲೇಷನ್‌ನಲ್ಲಿರುವವರ ಸಂಖ್ಯೆ 11ಕ್ಕೆ ಇಳಿದಿದೆ.

ಜಿಲ್ಲೆಯಲ್ಲಿ ಇದುವರೆಗೆ 32,523 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 31,967 ಮಂದಿ ಸೋಂಕುಮುಕ್ತರಾಗಿದ್ದಾರೆ.

ಲಸಿಕಾ ಮೇಳ: ಜಿಲ್ಲೆಯಲ್ಲಿ ಭಾನುವಾರದಿಂದಲೇ ಕೋವಿಡ್‌ ಲಸಿಕಾ ಮೇಳ ಆರಂಭವಾಗಿದ್ದು, ಇದೇ 14ರವರೆಗೆ ಮುಂದುವರೆಯಲಿದೆ. ಭಾನುವಾರ 7398 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 373 ಮಂದಿ ಮೊದಲ ಡೋಸ್‌ ಪಡೆದಿದ್ದರೆ, 7,025 ಮಂದಿ ಎರಡನೇ ಡೋಸ್‌ ಪಡೆದಿದ್ದಾರೆ. ಸೋಮವಾರವೂ ಲಸಿಕಾ ಮೇಳ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT