<p><strong>ಕೊಳ್ಳೇಗಾಲ:</strong> ಶಾಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹ ಸಹಕರಿಸಬೇಕು ಎಂದು ನಟ ಗಣೇಶ್ ರಾವ್ ಕೇಸರ್ಕರ್ ಹೇಳಿದರು.</p>.<p>ತಾಲ್ಲೂಕಿನ ಹೊಂಡರಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಂಗಳೂರಿನ ಜಿ.ಆರ್. ಫಿಲಮ್ಸ್ ಇಲ್ಲಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಕೊಡುಗೆ ನೀಡಿದ ಕ್ರೀಡಾ ಸಾಮಗ್ರಿ , ಸಮವಸ್ತ್ರ ಹಾಗೂ ಪುಸ್ತಕ ವಿತರಣೆ ಮಾಡಿ ಅವರು ಮಾತನಾಡಿದರು.</p>.<p>ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮ ಉದ್ದೇಶ. ನಾನು ಇದೇ ಶಾಲೆಯಲ್ಲಿ ಓದಿ ರಂಗಭೂಮಿ, ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಶಾಲೆ ನನ್ನ ಹೆಮ್ಮೆ. ಶಾಲೆಯ ಮಕ್ಕಳಿಗೆ ನಾನು ಉಚಿತ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿದ್ದೇನೆ. ಈ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಮಾಡುವ ಇಚ್ಛ ಇದೆ ಎಂದರು. ಶಾಲೆಯನ್ನು ನನಗೆ ದತ್ತು ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಲ್ಲಿ ಮನವಿ ಮಾಡಿದರು. ಈ ಊರಲ್ಲೇ ಹುಟ್ಟಿ ಬೆಳೆದವನು. ಶಾಲೆಯನ್ನುಇನ್ನೂ ಅಭಿವೃದ್ಧಿ ಮಾಡಬೇಕು ಎಂಬ ಕನಸನ್ನು ಕಂಡಿದ್ದೇನೆ ಎಂದರು.</p>.<p> ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಬಿ.ಆರ್.ಸಿ ಮಹದೇವಕುಮಾರ್, ಮುಖ್ಯ ಶಿಕ್ಷಕ ವಾಸು, ಗ್ರಾಮದ ಮುಖಂಡರು ಹಾಗೂ ಗಣೇಶ್ ಕುಟುಂಬದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ಶಾಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹ ಸಹಕರಿಸಬೇಕು ಎಂದು ನಟ ಗಣೇಶ್ ರಾವ್ ಕೇಸರ್ಕರ್ ಹೇಳಿದರು.</p>.<p>ತಾಲ್ಲೂಕಿನ ಹೊಂಡರಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಂಗಳೂರಿನ ಜಿ.ಆರ್. ಫಿಲಮ್ಸ್ ಇಲ್ಲಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಕೊಡುಗೆ ನೀಡಿದ ಕ್ರೀಡಾ ಸಾಮಗ್ರಿ , ಸಮವಸ್ತ್ರ ಹಾಗೂ ಪುಸ್ತಕ ವಿತರಣೆ ಮಾಡಿ ಅವರು ಮಾತನಾಡಿದರು.</p>.<p>ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮ ಉದ್ದೇಶ. ನಾನು ಇದೇ ಶಾಲೆಯಲ್ಲಿ ಓದಿ ರಂಗಭೂಮಿ, ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಶಾಲೆ ನನ್ನ ಹೆಮ್ಮೆ. ಶಾಲೆಯ ಮಕ್ಕಳಿಗೆ ನಾನು ಉಚಿತ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿದ್ದೇನೆ. ಈ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಮಾಡುವ ಇಚ್ಛ ಇದೆ ಎಂದರು. ಶಾಲೆಯನ್ನು ನನಗೆ ದತ್ತು ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಲ್ಲಿ ಮನವಿ ಮಾಡಿದರು. ಈ ಊರಲ್ಲೇ ಹುಟ್ಟಿ ಬೆಳೆದವನು. ಶಾಲೆಯನ್ನುಇನ್ನೂ ಅಭಿವೃದ್ಧಿ ಮಾಡಬೇಕು ಎಂಬ ಕನಸನ್ನು ಕಂಡಿದ್ದೇನೆ ಎಂದರು.</p>.<p> ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಬಿ.ಆರ್.ಸಿ ಮಹದೇವಕುಮಾರ್, ಮುಖ್ಯ ಶಿಕ್ಷಕ ವಾಸು, ಗ್ರಾಮದ ಮುಖಂಡರು ಹಾಗೂ ಗಣೇಶ್ ಕುಟುಂಬದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>