<p><strong>ಯಳಂದೂರು</strong>: ‘ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತ ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ದೇಶ ಪ್ರತಿನಿಧಿಸಬಹುದು ಎಂಬುದನ್ನು ಸಾಧಿಸಿ ತೋರಿಸಿದ್ದಾರೆ’ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.</p>.<p>ತಾಲೂಕಿನ ಮೆಳ್ಳಹಳ್ಳಿಯ ಸರ್ಕಾರಿ ಆದರ್ಶ ಶಾಲೆಯ ಬಾಲಕಿಯರು ಮಧ್ಯಪ್ರದೇಶದ ಭೋಪಾಲ್ನಲ್ಲಿ ಡಿ.5ರಂದು ಆಯೋಜಿಸಿರುವ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>ಅಭಿಜಾತ ಪರಂಪರೆಯ ಕಲೆಯಾದ ಕಂಸಾಳೆ ಕಲೆಯನ್ನು ಉತ್ತರ ಭಾರತದಲ್ಲಿ ಮಕ್ಕಳು ಪ್ರದರ್ಶಿಸಲಿದ್ದಾರೆ. 15 ವಿದ್ಯಾರ್ಥಿನಿಯರು ತರಬೇತಿ ಪಡೆದು ಸಜ್ಜಾಗಿದ್ದಾರೆ. ಯಾವುದೇ ಆತಂಕಕ್ಕೆ ಒಳಗಾಗದೆ ಬಾಲೆಯರು ಕರುನಾಡಿನ ಕೀರ್ತಿ ಪತಾಕೆ ಹಾರಿಸಲಿ ಎಂದರು.</p>.<p>ಶಾಸಕರು ಮಕ್ಕಳ ಕಂಸಾಳೆ ಮತ್ತು ನೃತ್ಯ ರಂಗ ಪರಿಕರಗಳನ್ನು ಖರೀದಿಸಲು 30 ಸಾವಿರ ಧನಸಹಾಯ ನೀಡಿ ಬೀಳ್ಕೊಟ್ಟರು.</p>.<p>ಮುಖ್ಯ ಶಿಕ್ಷಕ ಗುರುಮೂರ್ತಿ, ಪಿಯು ಕಾಲೇಜು ಪ್ರಾಂಶುಪಾಲ ತಿಮ್ಮರಾಜು, ನಾಟಕ ಶಿಕ್ಷಕ ಮಧುಕರ್, ಶಿಕ್ಷಕ ಬಿ.ಎಸ್. ವಿನಯ್, ರೇವಣ್ಣ, ನಂಜುಂಡಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷ ಕುಮಾರ್, ದುಂಡಯ್ಯ, ಸೋಮಣ್ಣ, ರಾಜಶೇಖರ್, ರೇವಣ್ಣ, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ‘ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತ ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ದೇಶ ಪ್ರತಿನಿಧಿಸಬಹುದು ಎಂಬುದನ್ನು ಸಾಧಿಸಿ ತೋರಿಸಿದ್ದಾರೆ’ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.</p>.<p>ತಾಲೂಕಿನ ಮೆಳ್ಳಹಳ್ಳಿಯ ಸರ್ಕಾರಿ ಆದರ್ಶ ಶಾಲೆಯ ಬಾಲಕಿಯರು ಮಧ್ಯಪ್ರದೇಶದ ಭೋಪಾಲ್ನಲ್ಲಿ ಡಿ.5ರಂದು ಆಯೋಜಿಸಿರುವ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>ಅಭಿಜಾತ ಪರಂಪರೆಯ ಕಲೆಯಾದ ಕಂಸಾಳೆ ಕಲೆಯನ್ನು ಉತ್ತರ ಭಾರತದಲ್ಲಿ ಮಕ್ಕಳು ಪ್ರದರ್ಶಿಸಲಿದ್ದಾರೆ. 15 ವಿದ್ಯಾರ್ಥಿನಿಯರು ತರಬೇತಿ ಪಡೆದು ಸಜ್ಜಾಗಿದ್ದಾರೆ. ಯಾವುದೇ ಆತಂಕಕ್ಕೆ ಒಳಗಾಗದೆ ಬಾಲೆಯರು ಕರುನಾಡಿನ ಕೀರ್ತಿ ಪತಾಕೆ ಹಾರಿಸಲಿ ಎಂದರು.</p>.<p>ಶಾಸಕರು ಮಕ್ಕಳ ಕಂಸಾಳೆ ಮತ್ತು ನೃತ್ಯ ರಂಗ ಪರಿಕರಗಳನ್ನು ಖರೀದಿಸಲು 30 ಸಾವಿರ ಧನಸಹಾಯ ನೀಡಿ ಬೀಳ್ಕೊಟ್ಟರು.</p>.<p>ಮುಖ್ಯ ಶಿಕ್ಷಕ ಗುರುಮೂರ್ತಿ, ಪಿಯು ಕಾಲೇಜು ಪ್ರಾಂಶುಪಾಲ ತಿಮ್ಮರಾಜು, ನಾಟಕ ಶಿಕ್ಷಕ ಮಧುಕರ್, ಶಿಕ್ಷಕ ಬಿ.ಎಸ್. ವಿನಯ್, ರೇವಣ್ಣ, ನಂಜುಂಡಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷ ಕುಮಾರ್, ದುಂಡಯ್ಯ, ಸೋಮಣ್ಣ, ರಾಜಶೇಖರ್, ರೇವಣ್ಣ, ಮಲ್ಲಿಕಾರ್ಜುನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>