‘ದೇವಾಲಯದ ಒಳಭಾಗದಲ್ಲಿ ನಡೆಯುವ ದೈನಂದಿನ ಸೇವೆಗಳಾದ ರುದ್ರಾಭಿಷೇಕ, ಮಹಾಮಂಗಳಾರತಿ, ಲಾಡು ಪ್ರಸಾದ, ಹುಲಿವಾಹನ, ಬಸವವಾಹನ, ರುದ್ರಾಕ್ಷಿಮಂಟಪ ಸೇವೆ, ಚಿನ್ನದ ರಥೋತ್ಸವ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.ದಾಸೋಹವನ್ನೂ ಆರಂಭಿಸಲಾಗಿದೆ. ಮುಂದಿನ ಆದೇಶದವರೆಗೆ ಜಾತ್ರಾ ಮಹೋತ್ಸವ, ತೆಪ್ಪೋತ್ಸವ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ’ ಎಂದು ಪ್ರಾಧಿಕಾರದ ಕಾರ್ಯಧರ್ಶಿ ಜಯವಿಭವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.