ಮೂರು ದಿನಗಳಿಂದ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ಮಾದಪ್ಪನ ದರ್ಶನ ಪಡೆಯುತ್ತಿದ್ದಾರೆ. ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಬಂದಿರುವ ಸಾವಿರಾರು ಭಕ್ತರು, ದೇವಾಲಯ ಪ್ರಾಂಗಣ, ರಂಗಮಂದಿರ, ಬಸ್ ನಿಲ್ದಾಣ, ರಾಜಗೋಪುರದ ಎಡ-ಬಲ ಬದಿಯ ಆವರಣ, ದಾಸೋಹ, ಮಹದೇಶ್ವರ ಕಲ್ಯಾಣ ಮಂಟಪ ಬಳಿ, ಸಾಲೂರು ಮಠದ ಆವರಣ
ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಡಾರ ಹೂಡಿದ್ದಾರೆ.