ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಅವರು ತಾಲ್ಲೂಕಿನ ಹೆಗ್ಗವಾಡಿಯ ಧ್ರುವನಾರಾಯಣ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಪತ್ನಿ ವೀಣಾ, ಮಕ್ಕಳಾದ ದರ್ಶನ್ ಹಾಗೂ ಧೀರೇನ್ ಅವರಿಗೆ ಧೈರ್ಯ ತುಂಬಿದ ಯಶವಂತರಾವ್, ‘ಧ್ರುವನಾರಾಯಣ ಬಹಳ ಸಜ್ಜನಿಕೆಯುಳ್ಳ ಅದರ್ಶ ರಾಜಕಾರಣಿಯಾಗಿದ್ದರು. ಕ್ರಿಯಾಶೀಲರಾಗಿ ಎಲ್ಲ ವರ್ಗದ ಜನರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದರು. ಅವರ ಅಕಾಲಿಕ ನಿಧನ ಕುಟುಂಭಕ್ಕೆ ಅಷ್ಟೇ ಅಲ್ಲ ಸಮಾಜಕ್ಕು ತುಂಬಲಾರದ ನಷ್ಟವಾಗಿದೆ’ ಎಂದು ಕಂಬಿನಿ ಮಿಡಿದರು.
ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು), ವಕೀಲರಾದ ಪುಟ್ಟಸ್ವಾಮಿ ರಾಮಸಮುದ್ರ, ಗಂಗಾಧರ್ ಇತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.