<p><strong>ಹನೂರು</strong>: ‘ಎಲ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೂ ಸ್ವಂತ ಆಂಬುಲೆನ್ಸ್ ನೀಡುವ ಕುರಿತು ಈಗಾಗಲೇ ಚಿಂತನೆ ನಡೆಸಲಾಗಿದೆ’ ಎಂದು ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು.</p>.<p>ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ನೂತನ ಆಂಬುಲೆನ್ಸ್ ವಾಹನವನ್ನು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿ ಮಾತನಾಡಿದರು.</p>.<p>‘ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿರುವ ಹನೂರು ಕ್ಷೇತ್ರಕ್ಕೆ ಆಂಬುಲೆನ್ಸ್ಗಳ ಸೇವೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಿಗೂ ಸಹ ಆಂಬುಲೆನ್ಸ್ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.</p>.<p>‘ಇದರಿಂದ ಸಾರ್ವಜನಿಕರಿಗೆ ಒಳ್ಳೆಯ ಸೇವೆ ಸಿಗಲಿ, ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ವ್ಯಕ್ತಿಗಳಿಗೆ ಸದುಪಯೋಗವಾಗಲಿ’ ಎಂದರು.</p>.<p>ತಾಲೂಕು ವೈದ್ಯಾಧಿಕಾರಿ ಡಾ.ಪ್ರಕಾಶ್ ಮಾತನಾಡಿ, ‘ಆಂಬುಲೆನ್ಸ್ ಕೊರತೆ ಬಗ್ಗೆ ನಾವು ಹಿರಿಯ ಅಧಿಕಾರಿಗಳು ಹಾಗೂ ಶಾಸಕರ ಗಮನಕ್ಕೆ ತಂದಿದ್ದೆವು. ಹಂತ ಹಂತವಾಗಿ ಆಂಬುಲೆನ್ಸ್ ಕೊರತೆ ನೀಗಿಸಲು ಶಾಸಕರು, ಹಿರಿಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ’ ಎಂದರು.</p>.<p>ತಹಶಿಲ್ದಾರ್ ಚೈತ್ರಾ, ತಾಲ್ಲೂಕು ಪಂಚಾಯಿತಿ ಇ.ಒ ಉಮೇಶ್, ರಾಮಾಪುರ ವೈದ್ಯಧಿಕಾರಿ ಮನು, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ‘ಎಲ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೂ ಸ್ವಂತ ಆಂಬುಲೆನ್ಸ್ ನೀಡುವ ಕುರಿತು ಈಗಾಗಲೇ ಚಿಂತನೆ ನಡೆಸಲಾಗಿದೆ’ ಎಂದು ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು.</p>.<p>ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ನೂತನ ಆಂಬುಲೆನ್ಸ್ ವಾಹನವನ್ನು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿ ಮಾತನಾಡಿದರು.</p>.<p>‘ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿರುವ ಹನೂರು ಕ್ಷೇತ್ರಕ್ಕೆ ಆಂಬುಲೆನ್ಸ್ಗಳ ಸೇವೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಿಗೂ ಸಹ ಆಂಬುಲೆನ್ಸ್ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.</p>.<p>‘ಇದರಿಂದ ಸಾರ್ವಜನಿಕರಿಗೆ ಒಳ್ಳೆಯ ಸೇವೆ ಸಿಗಲಿ, ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ವ್ಯಕ್ತಿಗಳಿಗೆ ಸದುಪಯೋಗವಾಗಲಿ’ ಎಂದರು.</p>.<p>ತಾಲೂಕು ವೈದ್ಯಾಧಿಕಾರಿ ಡಾ.ಪ್ರಕಾಶ್ ಮಾತನಾಡಿ, ‘ಆಂಬುಲೆನ್ಸ್ ಕೊರತೆ ಬಗ್ಗೆ ನಾವು ಹಿರಿಯ ಅಧಿಕಾರಿಗಳು ಹಾಗೂ ಶಾಸಕರ ಗಮನಕ್ಕೆ ತಂದಿದ್ದೆವು. ಹಂತ ಹಂತವಾಗಿ ಆಂಬುಲೆನ್ಸ್ ಕೊರತೆ ನೀಗಿಸಲು ಶಾಸಕರು, ಹಿರಿಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ’ ಎಂದರು.</p>.<p>ತಹಶಿಲ್ದಾರ್ ಚೈತ್ರಾ, ತಾಲ್ಲೂಕು ಪಂಚಾಯಿತಿ ಇ.ಒ ಉಮೇಶ್, ರಾಮಾಪುರ ವೈದ್ಯಧಿಕಾರಿ ಮನು, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>