ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವಲಯದಲ್ಲಿರುವ ಭೂತಾಣಿ ಪೋಡಿನ ನಿವಾಸಿ, ತುಂಬು ಗರ್ಭಿಣಿಯಾಗಿದ್ದ ಮಾದಮ್ಮ ಅವರಿಗೆ ಮಂಗಳವಾರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿಕೊಂಡಿತು. ಆಂಬುಲೆನ್ಸ್ಗೆ ಕರೆ ಮಾಡಿದರೂ ಬರಲಿಲ್ಲ. ನಂತರ ಅವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ವಾಹನ ನೀಡುವಂತೆ ಮನವಿ ಮಾಡಿದರು. ತಕ್ಷಣ ಅಧಿಕಾರಿಗಳು ಸಫಾರಿ ಜೀಪನ್ನು ಕಳುಹಿಸಿದರು.