<p><strong>ಚಾಮರಾಜನಗರ:</strong> ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಲಾಗಿದ್ದ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.</p>.<p>ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾನಿರತರು ಮೆರವಣಿಗೆಯ ಮೂಲಕ ಅಗ್ರಹಾರ ಬೀದಿ, ಭುವನೇಶ್ವರಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಈ ಸಂದರ್ಭ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಭಿತ್ತಿಪತ್ರಗಳಿಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿದರು. </p>.<p>ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಮಾತನಾಡಿ, ಶಿಕ್ಷಣ ಇಲಾಖೆಯು ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವುದನ್ನು ನಿಲ್ಲಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆ.ಜಿ, ಯುಕೆಜಿ ನಡೆಯಬೇಕು. ಪ್ರತಿವರ್ಷ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡಬೇಕು.</p>.<p>ಅಂಗನವಾಡಿ ನೌಕರರ ಪಾಲಿಗೆ ಕರಾಳವಾಗಿರುವ 4 ಕಾರ್ಮಿಕ ಸಂಹಿತೆಗಳು ರದ್ದುಪಡಿಸಬೇಕು. ಶಾಸನ ಬದ್ದ ಸವಲತ್ತುಗಳನ್ನು ನೀಡದ ‘ಶ್ರಮಶಕ್ತಿ ನೀತಿ 2025 ರದ್ದುಗೊಳಿಸಬೇಕು, ಅಂಗನವಾಡಿ ನೌಕರರಿಗೂ ಮುಟ್ಟಿನ ರಜೆ ನೀಡಬೇಕು. 4.56 ಕೋಟಿ ಸ್ಕೀಂ ಕಾರ್ಮಿಕರ ಸೇವಾ ಷರತ್ತುಗಳ ಸುಧಾರಣೆಗೆ ಪ್ರತ್ಯೇಕ ವೇತನ ಆಯೋಗ ರಚಿಸಬೇಕು ಎಂದು ಒತ್ತಾಯಿಸಿದರು.</p>.<p>ಐಸಿಡಿಎಸ್ ಯೋಜನೆ ಖಾಯಂಗೊಳಿಸಬೇಕು, ಅಲ್ಲಿಯವರೆಗೂ ಪ್ರತ್ಯೇಕ ನಿರ್ದೇಶನಾಲಯ ರಚಿಸಬೇಕು. 2018ರ ಫಲಾನುಭವಿಗಳ ಘಟಕ ವೆಚ್ಚವನ್ನು ಹೆಚ್ಚಳ ಮಾಡಬೇಕು, ಸ್ಥಳೀಯ ಆಹಾರ-ಪದಾರ್ಥಗಳನ್ನು ನೀಡಬೇಕು. 2018ರಿಂದ ಕೇಂದ್ರ ಸರ್ಕಾರ ಅಂಗನವಾಡಿ ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ, ಅಗತ್ಯ ವಸ್ತುಗಳ ಬೆಲೆ ಗನಕ್ಕೇರಿದ್ದರೂ ಅಂಗನವಾಡಿ ಕಾರ್ಯಕರ್ತೆಗೆ ₹ 2,700, ಸಹಾಯಕಿಯರಿಗೆ ₹ 1,350 ಮಾತ್ರ ನೀಡಲಾಗುತ್ತಿದ್ದು ಗೌರವಯುತವಾಗಿ ಬದುಕಲು ಸಾದ್ಯವಾಗುತ್ತಿಲ್ಲ.</p>.<p>ಕೇಂದ್ರ ಸರ್ಕಾರ ಕನಿಷ್ಠ ವೇತನ ಜಾರಿ ಮಾಡಬೇಕು, ಎಫ್ಆರ್ಎಸ್ ರದ್ದು ಮಾಡಬೇಕು, ತಂತ್ರಜ್ಞಾನ ಯುಗದಲ್ಲಿ ಅಗತ್ಯತೆ ಹೆಚ್ಚಾಗಿದ್ದು ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ಸೌಲಭ್ಯ ನೀಡಬೇಕು. ಚುನಾವಣಾ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅಂಗನವಾಡಿ ಕಾರ್ಯಕರ್ತರ ಮೇಲೆ ಏಕಾಏಕಿ ಶಿಸ್ತುಕ್ರಮ ಜರುಗಿಸಬಾರದು, ಬಂಧನವಾದಾಗ ವಿಚಾರಣೆ ನಡೆಸದೆ ಏಕಪಕ್ಷೀಯವಾಗಿ ಕೆಲಸದಿಂದ ವಜಾಗೊಳಿಸಬಾರದು, ಅಂಗನವಾಡಿ ನೌಕರರ ನೌಕರಿ ಖಾಯಂ ಆಗುವವರೆಗೂ ಕನಿಷ್ಠ ₹ 26,000 ವೇತನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷೆ ಗುರುಮಲ್ಲಮ್ಮ, ಕಾರ್ಯದರ್ಶಿ ದೇವಮಣಿ, ಚಾಮರಾಜನಗರ ತಾಲ್ಲೂಕು ಕಾರ್ಯದರ್ಶಿ ಶಾಹಿದಾ ಬಾನು, ಖಜಾಂಚಿ ಗುರುಲಿಂಗಮ್ಮ, ಸಂತೇಮರಹಳ್ಳಿ ಅಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ತೊಳಸಮ್ಮ, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷೆ<br />ಶಾಂತಮ್ಮ, ಯಳಂದೂರು ತಾಲ್ಲೂಕು ಅಧ್ಯಕ್ಷೆ ಮೀನಾಕ್ಷೆ, ಬಿಸಿಯೂಟ ಜಿಲ್ಲಾಧ್ಯಕ್ಷೆ, ಶಿವಮ್ಮ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಲಾಗಿದ್ದ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.</p>.<p>ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾನಿರತರು ಮೆರವಣಿಗೆಯ ಮೂಲಕ ಅಗ್ರಹಾರ ಬೀದಿ, ಭುವನೇಶ್ವರಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಈ ಸಂದರ್ಭ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಭಿತ್ತಿಪತ್ರಗಳಿಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿದರು. </p>.<p>ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಮಾತನಾಡಿ, ಶಿಕ್ಷಣ ಇಲಾಖೆಯು ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವುದನ್ನು ನಿಲ್ಲಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆ.ಜಿ, ಯುಕೆಜಿ ನಡೆಯಬೇಕು. ಪ್ರತಿವರ್ಷ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡಬೇಕು.</p>.<p>ಅಂಗನವಾಡಿ ನೌಕರರ ಪಾಲಿಗೆ ಕರಾಳವಾಗಿರುವ 4 ಕಾರ್ಮಿಕ ಸಂಹಿತೆಗಳು ರದ್ದುಪಡಿಸಬೇಕು. ಶಾಸನ ಬದ್ದ ಸವಲತ್ತುಗಳನ್ನು ನೀಡದ ‘ಶ್ರಮಶಕ್ತಿ ನೀತಿ 2025 ರದ್ದುಗೊಳಿಸಬೇಕು, ಅಂಗನವಾಡಿ ನೌಕರರಿಗೂ ಮುಟ್ಟಿನ ರಜೆ ನೀಡಬೇಕು. 4.56 ಕೋಟಿ ಸ್ಕೀಂ ಕಾರ್ಮಿಕರ ಸೇವಾ ಷರತ್ತುಗಳ ಸುಧಾರಣೆಗೆ ಪ್ರತ್ಯೇಕ ವೇತನ ಆಯೋಗ ರಚಿಸಬೇಕು ಎಂದು ಒತ್ತಾಯಿಸಿದರು.</p>.<p>ಐಸಿಡಿಎಸ್ ಯೋಜನೆ ಖಾಯಂಗೊಳಿಸಬೇಕು, ಅಲ್ಲಿಯವರೆಗೂ ಪ್ರತ್ಯೇಕ ನಿರ್ದೇಶನಾಲಯ ರಚಿಸಬೇಕು. 2018ರ ಫಲಾನುಭವಿಗಳ ಘಟಕ ವೆಚ್ಚವನ್ನು ಹೆಚ್ಚಳ ಮಾಡಬೇಕು, ಸ್ಥಳೀಯ ಆಹಾರ-ಪದಾರ್ಥಗಳನ್ನು ನೀಡಬೇಕು. 2018ರಿಂದ ಕೇಂದ್ರ ಸರ್ಕಾರ ಅಂಗನವಾಡಿ ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ, ಅಗತ್ಯ ವಸ್ತುಗಳ ಬೆಲೆ ಗನಕ್ಕೇರಿದ್ದರೂ ಅಂಗನವಾಡಿ ಕಾರ್ಯಕರ್ತೆಗೆ ₹ 2,700, ಸಹಾಯಕಿಯರಿಗೆ ₹ 1,350 ಮಾತ್ರ ನೀಡಲಾಗುತ್ತಿದ್ದು ಗೌರವಯುತವಾಗಿ ಬದುಕಲು ಸಾದ್ಯವಾಗುತ್ತಿಲ್ಲ.</p>.<p>ಕೇಂದ್ರ ಸರ್ಕಾರ ಕನಿಷ್ಠ ವೇತನ ಜಾರಿ ಮಾಡಬೇಕು, ಎಫ್ಆರ್ಎಸ್ ರದ್ದು ಮಾಡಬೇಕು, ತಂತ್ರಜ್ಞಾನ ಯುಗದಲ್ಲಿ ಅಗತ್ಯತೆ ಹೆಚ್ಚಾಗಿದ್ದು ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ಸೌಲಭ್ಯ ನೀಡಬೇಕು. ಚುನಾವಣಾ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಅಂಗನವಾಡಿ ಕಾರ್ಯಕರ್ತರ ಮೇಲೆ ಏಕಾಏಕಿ ಶಿಸ್ತುಕ್ರಮ ಜರುಗಿಸಬಾರದು, ಬಂಧನವಾದಾಗ ವಿಚಾರಣೆ ನಡೆಸದೆ ಏಕಪಕ್ಷೀಯವಾಗಿ ಕೆಲಸದಿಂದ ವಜಾಗೊಳಿಸಬಾರದು, ಅಂಗನವಾಡಿ ನೌಕರರ ನೌಕರಿ ಖಾಯಂ ಆಗುವವರೆಗೂ ಕನಿಷ್ಠ ₹ 26,000 ವೇತನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷೆ ಗುರುಮಲ್ಲಮ್ಮ, ಕಾರ್ಯದರ್ಶಿ ದೇವಮಣಿ, ಚಾಮರಾಜನಗರ ತಾಲ್ಲೂಕು ಕಾರ್ಯದರ್ಶಿ ಶಾಹಿದಾ ಬಾನು, ಖಜಾಂಚಿ ಗುರುಲಿಂಗಮ್ಮ, ಸಂತೇಮರಹಳ್ಳಿ ಅಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ತೊಳಸಮ್ಮ, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷೆ<br />ಶಾಂತಮ್ಮ, ಯಳಂದೂರು ತಾಲ್ಲೂಕು ಅಧ್ಯಕ್ಷೆ ಮೀನಾಕ್ಷೆ, ಬಿಸಿಯೂಟ ಜಿಲ್ಲಾಧ್ಯಕ್ಷೆ, ಶಿವಮ್ಮ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>