ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ದೇಶದಾದ್ಯಂತ ನಿರಂತರವಾಗಿ ನಡೆದ ಹೋರಾಟದಿಂದ ಎಚ್ಚೆತ್ತುಕೊಂಡು ಕೇಂದ್ರ ಸರ್ಕಾರ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿದೆ. ಆದರೆ, ರಾಜ್ಯದಲ್ಲಿ ಕಾಯ್ದೆಯನ್ನು ವಾಪಸ್ ಪಡೆಯುವುದಿಲ್ಲ ಎಂದು ಸಹಕಾರ, ಎಪಿಎಂಸಿ ಸಚಿವ ಎಸ್.ಟಿ.ಸೋಮಶೇಖರ್ ಸದನದಲ್ಲಿ ಹೇಳಿದ್ದಾರೆ. ಜೊತೆಗೆ ಹಳೆಯ ಕಾಯ್ದೆಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹಳೆ ಕಾಯ್ದೆಯಲ್ಲೂ ರೈತರಿಗೆ ದಂಡ ಹಾಕುವ ನಿಯಮ ಇರಲಿಲ್ಲ. ಮೊದಲು ಕೂಡ ಎಲ್ಲಿ ಬೇಕಾದರೂ ರೈತರು ಉತ್ಪನ್ನಗಳನ್ನು ಮಾರಾಟ ಮಾಡಬಹುದಿತ್ತು’ ಎಂದರು.