ಚಾಮರಾಜನಗರ: ‘ನಾನು ಈ ಹಿಂದೆ ಉನ್ನತ ಶಿಕ್ಷಣ ಸಚಿವನಾಗಿದ್ದೆ. ಹಾಗಾಗಿ, ಸುರೇಶ್ ಕುಮಾರ್ ಅವರ ಜೊತೆಗೆ ಶಿಕ್ಷಣ ಸಚಿವನಾಗುತ್ತೇನೆ ಎಂದುಕೊಂಡಿದ್ದೆ. ಆದರೆ, ಮುಖ್ಯಮಂತ್ರಿ ಅವರು ನನಗೆ ಕಾಡಿನ ಮತ್ತು ನಾಡಿನ ಜವಾಬ್ದಾರಿ ನೀಡಿದ್ದಾರೆ. ರಾತ್ರಿ ಹೊತ್ತು ಕಾಡಿನಲ್ಲಿ ಇರಬೇಕು. ಹಗಲು ಹೊತ್ತು ನಾಡಿನಲ್ಲಿರಬೇಕು’ ಎಂದು ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಹೇಳಿದರು.