<p><strong>ಚಾಮರಾಜನಗರ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಹಿಸಿ ಆ.12 ರಿಂದ 14ರವರೆಗೆ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಮೇಟಿ ಮನವಿ ಮಾಡಿದರು.</p>.<p>ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 12ರಂದು ಜಿಲ್ಲಾಡಳಿತ ಭವನದ ಮುಂಭಾಗ ಅಹೋರಾತ್ರಿ ಧರಣಿ ಆರಂಭವಾಗಲಿದ್ದು 800ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ರಾಜ್ಯದಾದ್ಯಂತ ಧರಣಿ ನಡೆಯಲಿದೆ ಎಂದರು.</p>.<p>ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹ 10,000 ಗೌರವಧನವನ್ನು ಏಪ್ರಿಲ್ನಿಂದ ಅನ್ವಯವಾಗುವಂತೆ ನೀಡಬೇಕು, ಬಜೆಟ್ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಲಾಗಿರುವು ₹ 1000 ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ಕೊಡಬೇಕು, ಜನಸಂಖ್ಯೆಯ ಮಿತಿ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.</p>.<p>ಅವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಕೈಬಿಡಬೇಕು, ಆಶಾ ಸುಗಮಕಾರರನ್ನು ಮುಂದುವರಿಸಬೇಕು, ನಿವೃತ್ತರಾದವರಿಗೆ ಇಡಿಗಂಟು ನೀಡಬೇಕು, 2 ಸಾವಿರ ಗೌರವ ಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಆಶಾ ಯೂನಿಯನ್ ರಾಜ್ಯ ಉಪಾಧ್ಯಕ್ಷೆ ಉಮಾದೇವಿ, ಸಂಘದ ಜಿಲ್ಲಾಧ್ಯಕ್ಷೆ ಕವಿತಾ, ಮುಖಂಡರಾದ ಭಾಗ್ಯ, ಅಶ್ವಿನಿ, ಜಯಲಕ್ಷ್ಮೀ, ಶಶಿಕಲಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಹಿಸಿ ಆ.12 ರಿಂದ 14ರವರೆಗೆ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಮೇಟಿ ಮನವಿ ಮಾಡಿದರು.</p>.<p>ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 12ರಂದು ಜಿಲ್ಲಾಡಳಿತ ಭವನದ ಮುಂಭಾಗ ಅಹೋರಾತ್ರಿ ಧರಣಿ ಆರಂಭವಾಗಲಿದ್ದು 800ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ರಾಜ್ಯದಾದ್ಯಂತ ಧರಣಿ ನಡೆಯಲಿದೆ ಎಂದರು.</p>.<p>ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹ 10,000 ಗೌರವಧನವನ್ನು ಏಪ್ರಿಲ್ನಿಂದ ಅನ್ವಯವಾಗುವಂತೆ ನೀಡಬೇಕು, ಬಜೆಟ್ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಲಾಗಿರುವು ₹ 1000 ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ಕೊಡಬೇಕು, ಜನಸಂಖ್ಯೆಯ ಮಿತಿ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.</p>.<p>ಅವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಕೈಬಿಡಬೇಕು, ಆಶಾ ಸುಗಮಕಾರರನ್ನು ಮುಂದುವರಿಸಬೇಕು, ನಿವೃತ್ತರಾದವರಿಗೆ ಇಡಿಗಂಟು ನೀಡಬೇಕು, 2 ಸಾವಿರ ಗೌರವ ಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಆಶಾ ಯೂನಿಯನ್ ರಾಜ್ಯ ಉಪಾಧ್ಯಕ್ಷೆ ಉಮಾದೇವಿ, ಸಂಘದ ಜಿಲ್ಲಾಧ್ಯಕ್ಷೆ ಕವಿತಾ, ಮುಖಂಡರಾದ ಭಾಗ್ಯ, ಅಶ್ವಿನಿ, ಜಯಲಕ್ಷ್ಮೀ, ಶಶಿಕಲಾ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>