ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ರಸ್ತೆಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಸ್ವಲ್ಪ ಕೆಲಸ ಮುಗಿದಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ಎದುರು ಚರಂಡಿ ನಿರ್ಮಾಣಕ್ಕಾಗಿ ಹಳ್ಳ ತೆಗೆಯಲಾಗಿದೆ.ಭಾನುವಾರ ಸಂಜೆ ಮಂಜುನಾಥ್ ಅವರು ಚಲಾಯಿಸುತ್ತಿದ್ದ ಆಟೊ ಪಲ್ಟಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.