ನಗರದ ತರಕಾರಿ ಮಾರುಕಟ್ಟೆ, ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ರಥದ ಬೀದಿ ಹಾಗೂ ಸುತ್ತಮುತ್ತಲಿನ ಬೀದಿಗಳಲ್ಲಿ ಖರೀದಿ, ಮಾರಾಟ ಭರಾಟೆ ಜೋರಾಗಿತ್ತು. ಜನಸಂದಣಿ ಹೆಚ್ಚಾಗಿದ್ದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಭುವನೇಶ್ವರಿ ವೃತ್ತದಲ್ಲೇ ತ್ರಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ಪೊಲೀಸರು ತಡೆಯುತ್ತಿದ್ದರು. ದ್ವಿಚಕ್ರವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಕೊಟ್ಟರು.