<p><strong>ಚಾಮರಾಜನಗರ: </strong>ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಭಾರತ್ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಗಳ ಅಡಿಯಲ್ಲಿ ಜನರಿಗೆ ಆರೋಗ್ಯ ಕಾರ್ಡ್ಗಳನ್ನು ವಿತರಿಸುವ ಪ್ರಕ್ರಿಯೆ ಜಿಲ್ಲೆಯಲ್ಲಿ ಆರಂಭವಾಗಿದೆ.</p>.<p>ಆರೋಗ್ಯ ಇಲಾಖೆಯು ಜಿಲ್ಲೆಯ 10 ಲಕ್ಷ ಜನರಿಗೆ ಕಾರ್ಡ್ ವಿತರಿಸಲಿದೆ. ಯೋಜನೆಯ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಪ್ರತ್ಯೇಕ ಆರೋಗ್ಯ ಕಾರ್ಡ್ ಸಿಗಲಿದೆ.</p>.<p>ಕಾರ್ಡ್ ವಿತರಣೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಕೌಂಟರ್ಗಳನ್ನು ಹಾಗೂ ಕೊಳ್ಳೇಗಾಲ, ಯಳಂದೂರು ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ಆಸ್ಪತ್ರೆಗಳಲ್ಲಿ ತಲಾ ಒಂದು ಕೌಂಟರ್ ತೆರೆಯಲಾಗಿದೆ. ಟೋಕನ್ ವ್ಯವಸ್ಥೆಯ ಮೂಲಕ ಕಾರ್ಡ್ ವಿತರಿಸಲಾಗುತ್ತಿದೆ.</p>.<p class="Subhead"><strong>ದಿನಕ್ಕೆ 100 ಮಂದಿ ನೋಂದಣಿ:</strong></p>.<p class="Subhead">‘ಒಂದು ಕೌಂಟರ್ನಲ್ಲಿ ದಿನಕ್ಕೆ 100 ಫಲಾನುಭವಿಗಳನ್ನು ನೋಂದಣಿ ಮಾಡಿಕೊಳ್ಳಬಹುದು. ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಕೌಂಟರ್ಗಳಿದ್ದು, ದಿನಂಪ್ರತಿ 400 ಜನರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್ ಅವರು‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆಸ್ಪತ್ರೆಗೆ ಬರುವ ರೋಗಿಗಳಿಗೆ ಮೊದಲು ಈ ಕಾರ್ಡ್ ಕೊಡಬೇಕು ಎಂದು ನಮ್ಮ ಯೋಚನೆ ಇತ್ತು. ಈಗ ಜನರು ಕೂಡ ಬರುತ್ತಿದ್ದಾರೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಐದು ನಿಮಿಷಗಳಲ್ಲೇ ಕಾರ್ಡ್ ವಿತರಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p class="Subhead">ಯಾರು ಅರ್ಹರು?: ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿರುವವರೆಲ್ಲರೂ ಈ ಯೋಜನೆಯ ಅಡಿಯಲ್ಲಿ ಹೆಸರು ನೋಂದಾಯಿಸಲು ಅರ್ಹರು. ನೋಂದಾಯಿಸಿಕೊಳ್ಳಲು ಬರುವವರು ತಮ್ಮ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಸಲ್ಲಿಸಬೇಕು.</p>.<p class="Briefhead"><strong>₹5 ಲಕ್ಷ ವೆಚ್ಚದವರೆಗೆ ಚಿಕಿತ್ಸೆ</strong></p>.<p>ಕಾರ್ಡ್ ಹೊಂದಿರುವ ಫಲಾನುಭವಿಗಳು ಯೋಜನೆಯ ಅಡಿಯಲ್ಲಿ ವಾರ್ಷಿಕ ₹ 5 ಲಕ್ಷದವರೆಗಿನ ವೆಚ್ಚದ ಚಿಕಿತ್ಸೆಯನ್ನು ಸರ್ಕಾರಿ ಹಾಗೂ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಬಹುದು. ಬಿಪಿಎಲ್ ಕಾರ್ಡ್ದಾರರಿಗೆ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಸಿಗಲಿದೆ. ಎಪಿಎಲ್ ಕಾರ್ಡ್ದಾರರ ಚಿಕಿತ್ಸಾ ವೆಚ್ಚದಲ್ಲಿ ಸರ್ಕಾರ ಶೇ 30ರಷ್ಟನ್ನು ಭರಿಸಲಿದ್ದು, ಉಳಿದ ಶೇ 70ರಷ್ಟನ್ನು ಕಾರ್ಡ್ದಾರರು ಪಾವತಿಸಬೇಕಾಗುತ್ತದೆ.</p>.<p>ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ 1,614 ಕಾಯಿಲೆಗಳಿಗೆ ಚಿಕಿತ್ಸೆ ಲಭ್ಯವಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಿದ್ದರೆ ಸರ್ಕಾರಿ ವೈದ್ಯರು ಶಿಫಾರಸು ಕಡ್ಡಾಯ. ಕೆಲವು ತುರ್ತು ಪರಿಸ್ಥಿತಿಗಳಲ್ಲಿ ಇದರಿಂದ ವಿನಾಯಿತಿ ಇದೆ.</p>.<p>ಕಾರ್ಡ್ಗೆ ಹೆಸರು ನೋಂದಾಯಿಸಲು ಜನರು ₹10 ಶುಲ್ಕ ಪಾವತಿಸಬೇಕು.</p>.<p class="Briefhead"><strong>ಅಂಚೆಯಲ್ಲಿ ಬರುತ್ತಿದೆ ಕಾರ್ಡ್</strong></p>.<p>ಈ ಮಧ್ಯೆ, ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದ ಫಲಾನುಭವಿಗಳಿಗೆ, ಅಂಚೆ ಮೂಲಕವೇ ಆಯುಷ್ಮಾನ್ ಕಾರ್ಡ್ ತಲುಪುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಭಾರತ್ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಗಳ ಅಡಿಯಲ್ಲಿ ಜನರಿಗೆ ಆರೋಗ್ಯ ಕಾರ್ಡ್ಗಳನ್ನು ವಿತರಿಸುವ ಪ್ರಕ್ರಿಯೆ ಜಿಲ್ಲೆಯಲ್ಲಿ ಆರಂಭವಾಗಿದೆ.</p>.<p>ಆರೋಗ್ಯ ಇಲಾಖೆಯು ಜಿಲ್ಲೆಯ 10 ಲಕ್ಷ ಜನರಿಗೆ ಕಾರ್ಡ್ ವಿತರಿಸಲಿದೆ. ಯೋಜನೆಯ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಪ್ರತ್ಯೇಕ ಆರೋಗ್ಯ ಕಾರ್ಡ್ ಸಿಗಲಿದೆ.</p>.<p>ಕಾರ್ಡ್ ವಿತರಣೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಕೌಂಟರ್ಗಳನ್ನು ಹಾಗೂ ಕೊಳ್ಳೇಗಾಲ, ಯಳಂದೂರು ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ಆಸ್ಪತ್ರೆಗಳಲ್ಲಿ ತಲಾ ಒಂದು ಕೌಂಟರ್ ತೆರೆಯಲಾಗಿದೆ. ಟೋಕನ್ ವ್ಯವಸ್ಥೆಯ ಮೂಲಕ ಕಾರ್ಡ್ ವಿತರಿಸಲಾಗುತ್ತಿದೆ.</p>.<p class="Subhead"><strong>ದಿನಕ್ಕೆ 100 ಮಂದಿ ನೋಂದಣಿ:</strong></p>.<p class="Subhead">‘ಒಂದು ಕೌಂಟರ್ನಲ್ಲಿ ದಿನಕ್ಕೆ 100 ಫಲಾನುಭವಿಗಳನ್ನು ನೋಂದಣಿ ಮಾಡಿಕೊಳ್ಳಬಹುದು. ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಕೌಂಟರ್ಗಳಿದ್ದು, ದಿನಂಪ್ರತಿ 400 ಜನರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್ ಅವರು‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆಸ್ಪತ್ರೆಗೆ ಬರುವ ರೋಗಿಗಳಿಗೆ ಮೊದಲು ಈ ಕಾರ್ಡ್ ಕೊಡಬೇಕು ಎಂದು ನಮ್ಮ ಯೋಚನೆ ಇತ್ತು. ಈಗ ಜನರು ಕೂಡ ಬರುತ್ತಿದ್ದಾರೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಐದು ನಿಮಿಷಗಳಲ್ಲೇ ಕಾರ್ಡ್ ವಿತರಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p class="Subhead">ಯಾರು ಅರ್ಹರು?: ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿರುವವರೆಲ್ಲರೂ ಈ ಯೋಜನೆಯ ಅಡಿಯಲ್ಲಿ ಹೆಸರು ನೋಂದಾಯಿಸಲು ಅರ್ಹರು. ನೋಂದಾಯಿಸಿಕೊಳ್ಳಲು ಬರುವವರು ತಮ್ಮ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಸಲ್ಲಿಸಬೇಕು.</p>.<p class="Briefhead"><strong>₹5 ಲಕ್ಷ ವೆಚ್ಚದವರೆಗೆ ಚಿಕಿತ್ಸೆ</strong></p>.<p>ಕಾರ್ಡ್ ಹೊಂದಿರುವ ಫಲಾನುಭವಿಗಳು ಯೋಜನೆಯ ಅಡಿಯಲ್ಲಿ ವಾರ್ಷಿಕ ₹ 5 ಲಕ್ಷದವರೆಗಿನ ವೆಚ್ಚದ ಚಿಕಿತ್ಸೆಯನ್ನು ಸರ್ಕಾರಿ ಹಾಗೂ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಬಹುದು. ಬಿಪಿಎಲ್ ಕಾರ್ಡ್ದಾರರಿಗೆ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಸಿಗಲಿದೆ. ಎಪಿಎಲ್ ಕಾರ್ಡ್ದಾರರ ಚಿಕಿತ್ಸಾ ವೆಚ್ಚದಲ್ಲಿ ಸರ್ಕಾರ ಶೇ 30ರಷ್ಟನ್ನು ಭರಿಸಲಿದ್ದು, ಉಳಿದ ಶೇ 70ರಷ್ಟನ್ನು ಕಾರ್ಡ್ದಾರರು ಪಾವತಿಸಬೇಕಾಗುತ್ತದೆ.</p>.<p>ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ 1,614 ಕಾಯಿಲೆಗಳಿಗೆ ಚಿಕಿತ್ಸೆ ಲಭ್ಯವಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಿದ್ದರೆ ಸರ್ಕಾರಿ ವೈದ್ಯರು ಶಿಫಾರಸು ಕಡ್ಡಾಯ. ಕೆಲವು ತುರ್ತು ಪರಿಸ್ಥಿತಿಗಳಲ್ಲಿ ಇದರಿಂದ ವಿನಾಯಿತಿ ಇದೆ.</p>.<p>ಕಾರ್ಡ್ಗೆ ಹೆಸರು ನೋಂದಾಯಿಸಲು ಜನರು ₹10 ಶುಲ್ಕ ಪಾವತಿಸಬೇಕು.</p>.<p class="Briefhead"><strong>ಅಂಚೆಯಲ್ಲಿ ಬರುತ್ತಿದೆ ಕಾರ್ಡ್</strong></p>.<p>ಈ ಮಧ್ಯೆ, ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದ ಫಲಾನುಭವಿಗಳಿಗೆ, ಅಂಚೆ ಮೂಲಕವೇ ಆಯುಷ್ಮಾನ್ ಕಾರ್ಡ್ ತಲುಪುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>