ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ: ಹುಲಿ ದಾಳಿಗೆ ಮರಿಯಾನೆ ಸಾವು

ಮೂರು ದಿನಗಳ ಹಿಂದೆ ದಾಳಿ, ಶನಿವಾರ ಹೆದ್ದಾರಿ ಬದಿ ಮರಿ ಸಾವು
Published 20 ಏಪ್ರಿಲ್ 2024, 9:05 IST
Last Updated 20 ಏಪ್ರಿಲ್ 2024, 9:05 IST
ಅಕ್ಷರ ಗಾತ್ರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಊಟಿ ರಸ್ತೆಯಲ್ಲಿ ಹುಲಿಯೊಂದು ಮರಿಯಾನೆ ಮೇಲೆ ದಾಳಿ ಮಾಡಿದ್ದು, ಮರಿ ಮೃತಪಟ್ಟಿದೆ.

ಮೂರು ದಿನಗಳ ಹಿಂದೆಯೇ ಹುಲಿ ದಾಳಿ ಮಾಡಿದ್ದು, ಅಸ್ವಸ್ಥಗೊಂಡಿದ್ದ ಮರಿಯಾನೆ ಶನಿವಾರ ಹೆದ್ದಾರಿ ಬದಿ ಬಿದ್ದು ಮೃತಪಟ್ಟಿದೆ. ಆನೆಗೆ ನಾಲ್ಕು ತಿಂಗಳು ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಬಂಡೀಪುರದಿಂದ ಕೆಕ್ಕನಹಳ್ಳ ಚೆಕ್ ಪೋಸ್ಟ್ ಕಡೆಗೆ ಮೂರು ಕಿ.ಮೀ ದೂರದಲ್ಲಿ ಮರಿಯಾನೆ ಮೃತಪಟ್ಟಿದೆ.

ತಾಯಾನೆಯು ಮರಿಯ ಕಳೇಬರದ ಬಳಿ ನಿಂತು ರೋದಿಸುತ್ತಿದ್ದುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಕಿ.ಮೀ ಗಟ್ಟಲೆ ವಾಹನಗಳು ಸಾಲು ನಿಂತಿದ್ದವು.

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮರಿಯಾನೆ ಮೃತದೇಹವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT