ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ಹಾಗೂ ಕುಂದುಕೆರ ವಲಯ ಅರಣ್ಯಾಧಿಕಾರಿ ಶ್ರೀನಿವಾಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಂಡೀಪುರ ಅರಣ್ಯಾಧಿಕಾರಿ ರಮೇಶ್ ಕುಮಾರ್ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ ಅವರು ಮರಿಯಾನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಮೇಲಧಿಕಾರಿಗಳ ಅನುಮತಿ ಪಡೆದು ವನ್ಯಪ್ರಾಣಿಗಳ ಆಹಾರಕ್ಕಾಗಿ ಕಳೇಬರವನ್ನು ಪ್ರಕೃತಿಯಲ್ಲೇ ಬಿಡಲಾಯಿತು.