<p><strong>ಚಾಮರಾಜನಗರ</strong>: ತಾಲ್ಲೂಕಿನ ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆಯಲ್ಲಿ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.</p>.<p>ಬಗರ್ಹುಕುಂ ಅರ್ಜಿಗಳನ್ನು ಪರಿಶೀಲಿಸಿ ಮಾತನಾಡಿದ ಶಾಸಕರು, ‘ಕ್ಷೇತ್ರದಲ್ಲಿ ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ 7,626 ಅರ್ಜಿಗಳು ಬಂದಿದ್ದು 1,802 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಕಳೆದ ಸಭೆಯಲ್ಲಿ 8 ಅರ್ಜಿಗಳಿಗೆ ಮಂಜೂರಾತಿ ಸಿಕ್ಕಿದ್ದು, ಇಂದಿನ ಸಭೆಯಲ್ಲಿ 13 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಉಳಿದ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾಗುವಳಿ ಚೀಟಿ ವಿತರಣೆ ಮಾಡಿಸಲಾಗುವುದು’ ಎಂದರು.</p>.<p>‘ಜಾನುವಾರು ಸಂಖ್ಯೆಯ ಆಧರಿಸಿ ಹೆಚ್ಚುವರಿ ಗೋಮಾಳ ಲಭ್ಯವಿರುವ ಬಗ್ಗೆ ಪಶುಸಂಗೋಪನಾ ಇಲಾಖೆ ದೃಢಪಡಿಸಿದರೆ ಗೋಮಾಳ ಭೂಮಿ ಮಂಜೂರಾತಿ ಅರ್ಜಿಗಳನ್ನು ಪುರಸ್ಕರಿಸಲಾಗುವುದು’ ಎಂದರು.</p>.<p>ಸಭೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಕಾರ್ಯದರ್ಶಿ ಹಾಗೂ ತಹಶೀಲ್ದಾರ್ ಗಿರಿಜಾ, ಸದಸ್ಯರಾದ ಮಹಾಲಿಂಗು, ರವಿಕುಮಾರ್, ಮಲ್ಲಿಕಾ ಚನ್ನೇಗೌಡ, ಕಂದಾಯ ನಿರೀಕ್ಷಕ ರಾಜಶೇಖರ್, ಷಡಕ್ಷರಿ, ಗುರುಸಿದ್ದಪ್ಪ, ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ತಾಲ್ಲೂಕಿನ ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆಯಲ್ಲಿ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.</p>.<p>ಬಗರ್ಹುಕುಂ ಅರ್ಜಿಗಳನ್ನು ಪರಿಶೀಲಿಸಿ ಮಾತನಾಡಿದ ಶಾಸಕರು, ‘ಕ್ಷೇತ್ರದಲ್ಲಿ ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ 7,626 ಅರ್ಜಿಗಳು ಬಂದಿದ್ದು 1,802 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಕಳೆದ ಸಭೆಯಲ್ಲಿ 8 ಅರ್ಜಿಗಳಿಗೆ ಮಂಜೂರಾತಿ ಸಿಕ್ಕಿದ್ದು, ಇಂದಿನ ಸಭೆಯಲ್ಲಿ 13 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಉಳಿದ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾಗುವಳಿ ಚೀಟಿ ವಿತರಣೆ ಮಾಡಿಸಲಾಗುವುದು’ ಎಂದರು.</p>.<p>‘ಜಾನುವಾರು ಸಂಖ್ಯೆಯ ಆಧರಿಸಿ ಹೆಚ್ಚುವರಿ ಗೋಮಾಳ ಲಭ್ಯವಿರುವ ಬಗ್ಗೆ ಪಶುಸಂಗೋಪನಾ ಇಲಾಖೆ ದೃಢಪಡಿಸಿದರೆ ಗೋಮಾಳ ಭೂಮಿ ಮಂಜೂರಾತಿ ಅರ್ಜಿಗಳನ್ನು ಪುರಸ್ಕರಿಸಲಾಗುವುದು’ ಎಂದರು.</p>.<p>ಸಭೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಕಾರ್ಯದರ್ಶಿ ಹಾಗೂ ತಹಶೀಲ್ದಾರ್ ಗಿರಿಜಾ, ಸದಸ್ಯರಾದ ಮಹಾಲಿಂಗು, ರವಿಕುಮಾರ್, ಮಲ್ಲಿಕಾ ಚನ್ನೇಗೌಡ, ಕಂದಾಯ ನಿರೀಕ್ಷಕ ರಾಜಶೇಖರ್, ಷಡಕ್ಷರಿ, ಗುರುಸಿದ್ದಪ್ಪ, ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>