ಚಾಮರಾಜನಗರ: ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಶ್ರೀ ಕನಕಕ್ಷೇತ್ರದಲ್ಲಿ ನಡೆಯುತ್ತಿರುವ ಕನಕಗಿರಿ ಅತಿಶಯ ಮಹೋತ್ಸವ ಅಂಗವಾಗಿ ಬಾಹುಬಲಿ ಸ್ವಾಮಿಗೆ ಮಹಾಮಸ್ತಾಭಿಷೇಕಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರು ಚಾಲನೆ ನೀಡಿದರು. ಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಿಹಂತಗಿರಿ ಕ್ಷೇತ್ರದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಇತರರು ಇದ್ದರು.