<p><strong>ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ):</strong> ರೈತ ಸಂಘಟನೆಗಳ ವಿರೋಧದ ನಡುವೆಯೂ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಸಫಾರಿ ಪುನರಾರಂಭಗೊಂಡಿತು.</p>.<p>ಮಧ್ಯಾಹ್ನ 3 ಗಂಟೆಗೆ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದಿಂದ ನಾಲ್ಕು ಮಿನಿ ಬಸ್ಗಳು ಹಾಗೂ ಮೂರು ಜಿಪ್ಸಿ ವಾಹನಗಳು ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ದವು.</p>.<p>ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಕಾರಣದಿಂದಾಗಿ ಸಫಾರಿ ಕೇಂದ್ರ, ಗುಂಡ್ಲುಪೇಟೆ, ಹಂಗಳ ಚೆಕ್ಪೋಸ್ಟ್ ಹಾಗೂ ಕಲ್ಲಿಗೌಡನಹಳ್ಳಿ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>ಫೆ.23ರಿಂದ ಪ್ರತಿದಿನ ಐದು ತಾಸು ಸಫಾರಿ ನಡೆಯಲಿದ್ದು ಬೆಳಿಗ್ಗೆ 6.30ರಿಂದ 9 ಗಂಟೆ ಹಾಗೂ ಮಧ್ಯಾಹ್ನ 3.30ರಿಂದ 6ಗಂಟೆಯವರೆಗೆ ಸಫಾರಿಗೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಕೆಲವು ಷರತ್ತುಗಳನ್ನು ವಿಧಿಸಿದ್ದು, ಅವುಗಳನ್ನು ಪಾಲಿಸುವಂತೆಯೂ ಸೂಚಿಸಲಾಗಿದೆ.</p>.<p>ಅರಣ್ಯ ಇಲಾಖೆ ಹಾಗೂ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ ವಾಹನಗಳಲ್ಲಿ ಪ್ರವಾಸಿಗರು ಸಫಾರಿಗೆ ತೆರಳಬಹುದು. ಮಾನವ– ಪ್ರಾಣಿ ಸಂಘರ್ಷ ಹೆಚ್ಚಾದ ಕಾರಣದಿಂದ ನ.7ರಿಂದ ಸಫಾರಿ ಸ್ಥಗಿತವಾಗಿತ್ತು. </p>.<p><strong>ಮಡಿಕೇರಿ ವರದಿ:</strong> ಕೊಡಗು ಜಿಲ್ಲೆಯ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಪೊನ್ನಂಪೇಟೆ ತಾಲ್ಲೂಕಿನ ನಾಣಚ್ಚಿಯಲ್ಲಿ ಸಫಾರಿ ಭಾನುವಾರ ಪುನರಾರಂಭಗೊಂಡಿತು. ಎರಡು ವಾಹನಗಳಲ್ಲಿ 15 ಮಂದಿಯಷ್ಟೇ ಸಫಾರಿಗೆ ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ):</strong> ರೈತ ಸಂಘಟನೆಗಳ ವಿರೋಧದ ನಡುವೆಯೂ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಸಫಾರಿ ಪುನರಾರಂಭಗೊಂಡಿತು.</p>.<p>ಮಧ್ಯಾಹ್ನ 3 ಗಂಟೆಗೆ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದಿಂದ ನಾಲ್ಕು ಮಿನಿ ಬಸ್ಗಳು ಹಾಗೂ ಮೂರು ಜಿಪ್ಸಿ ವಾಹನಗಳು ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ದವು.</p>.<p>ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಕಾರಣದಿಂದಾಗಿ ಸಫಾರಿ ಕೇಂದ್ರ, ಗುಂಡ್ಲುಪೇಟೆ, ಹಂಗಳ ಚೆಕ್ಪೋಸ್ಟ್ ಹಾಗೂ ಕಲ್ಲಿಗೌಡನಹಳ್ಳಿ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<p>ಫೆ.23ರಿಂದ ಪ್ರತಿದಿನ ಐದು ತಾಸು ಸಫಾರಿ ನಡೆಯಲಿದ್ದು ಬೆಳಿಗ್ಗೆ 6.30ರಿಂದ 9 ಗಂಟೆ ಹಾಗೂ ಮಧ್ಯಾಹ್ನ 3.30ರಿಂದ 6ಗಂಟೆಯವರೆಗೆ ಸಫಾರಿಗೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಕೆಲವು ಷರತ್ತುಗಳನ್ನು ವಿಧಿಸಿದ್ದು, ಅವುಗಳನ್ನು ಪಾಲಿಸುವಂತೆಯೂ ಸೂಚಿಸಲಾಗಿದೆ.</p>.<p>ಅರಣ್ಯ ಇಲಾಖೆ ಹಾಗೂ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ ವಾಹನಗಳಲ್ಲಿ ಪ್ರವಾಸಿಗರು ಸಫಾರಿಗೆ ತೆರಳಬಹುದು. ಮಾನವ– ಪ್ರಾಣಿ ಸಂಘರ್ಷ ಹೆಚ್ಚಾದ ಕಾರಣದಿಂದ ನ.7ರಿಂದ ಸಫಾರಿ ಸ್ಥಗಿತವಾಗಿತ್ತು. </p>.<p><strong>ಮಡಿಕೇರಿ ವರದಿ:</strong> ಕೊಡಗು ಜಿಲ್ಲೆಯ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಪೊನ್ನಂಪೇಟೆ ತಾಲ್ಲೂಕಿನ ನಾಣಚ್ಚಿಯಲ್ಲಿ ಸಫಾರಿ ಭಾನುವಾರ ಪುನರಾರಂಭಗೊಂಡಿತು. ಎರಡು ವಾಹನಗಳಲ್ಲಿ 15 ಮಂದಿಯಷ್ಟೇ ಸಫಾರಿಗೆ ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>