<p><strong>ಚಾಮರಾಜನಗರ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವಿವಿಧ ವಲಯಗಳಲ್ಲಿ ಒಟ್ಟಾರೆ 4,520 ಎಕರೆ ಅರಣ್ಯ ಒತ್ತುವರಿಯಾಗಿದೆ ಎಂದು ಹೇಳಲಾಗುತ್ತಿದ್ದು, 1,121 ಪ್ರಕರಣಗಳನ್ನು ಅರಣ್ಯ ಇಲಾಖೆ ಗುರುತಿಸಿದೆ.</p>.<p>‘ಕೆಲವು ಕಡೆಗಳಲ್ಲಿ ಒತ್ತುವರಿಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿದ್ದು, ಮದ್ದೂರು ವಲಯದಲ್ಲಿ ಎಂಟು ಪ್ರಕರಣಗಳಲ್ಲಿ 63 ಎಕರೆಯಷ್ಟನ್ನು ತೆರವುಗೊಳಿಸಲಾಗಿದೆ’ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಟಿ.ಬಾಲಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಒತ್ತುವರಿ ಪ್ರಕರಣಗಳು ಈಗಿನದ್ದಲ್ಲ. ಹಲವು ವರ್ಷಗಳ ಹಿಂದೆಯೇ ಆಗಿರುವಂತಹದ್ದು. ಗಮನಕ್ಕೆ ಬಂದಾಗಲೆಲ್ಲ ಪ್ರಕರಣ ದಾಖಲಿಸಿಕೊಂಡು ಒತ್ತುವರಿ ತೆರವುಗೊಳಿಸಲು ಇಲಾಖೆ ಕ್ರಮ ವಹಿಸುತ್ತಿದೆ’ ಎಂದು ಹೇಳಿದರು.</p>.<p>‘ಒತ್ತುವರಿಯಾದ ಪ್ರದೇಶಗಳೆಲ್ಲವೂ ಮೀಸಲು ಅರಣ್ಯಕ್ಕೆ ಸೇರಿದ್ದು, ಕಂದಾಯ ಭೂಮಿಗೆ ಹೊಂದಿಕೊಂಡಿವೆ. ಬಹುಪಾಲು ಇವು ಕಾಡಂಚಿನ ಪ್ರದೇಶಗಳು’ ಎಂದು ಮಾಹಿತಿ ನೀಡಿದರು.</p>.<p><strong>ಉನ್ನತಮಟ್ಟದಲ್ಲಿ ಆಗಬೇಕು:</strong> ಒತ್ತುವರಿ ತೆರವುಗೊಳಿಸುವ ಸಂಬಂಧ ಉನ್ನತ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಬೇಕಿದೆ. ಮೂರು ಎಕರೆವರೆಗೆ ಒತ್ತುವರಿಯಾಗಿದ್ದರೆ, ಅದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಬೇಡಿ ಎಂದು ಸರ್ಕಾರವೇ ಹೇಳಿದೆ. ಹೀಗಾಗಿ, ಉನ್ನತ ಮಟ್ಟದಿಂದಲೇ ಸ್ಪಷ್ಟ ಸೂಚನೆ ಬರಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವಿವಿಧ ವಲಯಗಳಲ್ಲಿ ಒಟ್ಟಾರೆ 4,520 ಎಕರೆ ಅರಣ್ಯ ಒತ್ತುವರಿಯಾಗಿದೆ ಎಂದು ಹೇಳಲಾಗುತ್ತಿದ್ದು, 1,121 ಪ್ರಕರಣಗಳನ್ನು ಅರಣ್ಯ ಇಲಾಖೆ ಗುರುತಿಸಿದೆ.</p>.<p>‘ಕೆಲವು ಕಡೆಗಳಲ್ಲಿ ಒತ್ತುವರಿಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿದ್ದು, ಮದ್ದೂರು ವಲಯದಲ್ಲಿ ಎಂಟು ಪ್ರಕರಣಗಳಲ್ಲಿ 63 ಎಕರೆಯಷ್ಟನ್ನು ತೆರವುಗೊಳಿಸಲಾಗಿದೆ’ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಟಿ.ಬಾಲಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಒತ್ತುವರಿ ಪ್ರಕರಣಗಳು ಈಗಿನದ್ದಲ್ಲ. ಹಲವು ವರ್ಷಗಳ ಹಿಂದೆಯೇ ಆಗಿರುವಂತಹದ್ದು. ಗಮನಕ್ಕೆ ಬಂದಾಗಲೆಲ್ಲ ಪ್ರಕರಣ ದಾಖಲಿಸಿಕೊಂಡು ಒತ್ತುವರಿ ತೆರವುಗೊಳಿಸಲು ಇಲಾಖೆ ಕ್ರಮ ವಹಿಸುತ್ತಿದೆ’ ಎಂದು ಹೇಳಿದರು.</p>.<p>‘ಒತ್ತುವರಿಯಾದ ಪ್ರದೇಶಗಳೆಲ್ಲವೂ ಮೀಸಲು ಅರಣ್ಯಕ್ಕೆ ಸೇರಿದ್ದು, ಕಂದಾಯ ಭೂಮಿಗೆ ಹೊಂದಿಕೊಂಡಿವೆ. ಬಹುಪಾಲು ಇವು ಕಾಡಂಚಿನ ಪ್ರದೇಶಗಳು’ ಎಂದು ಮಾಹಿತಿ ನೀಡಿದರು.</p>.<p><strong>ಉನ್ನತಮಟ್ಟದಲ್ಲಿ ಆಗಬೇಕು:</strong> ಒತ್ತುವರಿ ತೆರವುಗೊಳಿಸುವ ಸಂಬಂಧ ಉನ್ನತ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಬೇಕಿದೆ. ಮೂರು ಎಕರೆವರೆಗೆ ಒತ್ತುವರಿಯಾಗಿದ್ದರೆ, ಅದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಬೇಡಿ ಎಂದು ಸರ್ಕಾರವೇ ಹೇಳಿದೆ. ಹೀಗಾಗಿ, ಉನ್ನತ ಮಟ್ಟದಿಂದಲೇ ಸ್ಪಷ್ಟ ಸೂಚನೆ ಬರಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>