ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ ಸಫಾರಿ: ಮೊದಲ ದಿನ ನೀರಸ

Last Updated 9 ಜೂನ್ 2020, 3:37 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಕೋವಿಡ್-19 ಲಾಕ್ ಡೌನ್ ಕಾರಣದಿಂದ 70 ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿ ಸೋಮವಾರ ಆರಂಭವಾಯಿತು.

ಮೊದಲ ದಿನ ಪ್ರವಾಸಿಗರ ಪ್ರತಿಕ್ರಿಯೆ ನೀರಸವಾಗಿತ್ತು. ಬೆಳಿಗ್ಗೆ 11 ಮಂದಿ ಹಾಗೂ ಮಧ್ಯಾಹ್ನದ ಮೇಲೆ 36 ಮಂದಿ ಸಫಾರಿಗೆ ತೆರಳಿದರು. ಜಿಪ್ಸಿ ಹಾಗೂ ಬಸ್‌ಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಲಾಯಿತು.ಸಫಾರಿಗೆ ತೆರಳುವವರ ಕೈಗೆ ಸ್ಯಾನಿಟೈಸರ್ ಹಾಕಿ ವಾಹನ ಹತ್ತಿಸಲಾಯಿತು. ಜಿಪ್ಸಿಯಲ್ಲಿ ನಾಲ್ಕು ಮಂದಿ ಬಸ್‌ನಲ್ಲಿ 15 ಮಂದಿಯನ್ನು ಕರೆದೊಯ್ಯಲಾಯಿತು.

ಬೆಳಿಗ್ಗೆಯೇ ಸಫಾರಿ ಕೌಂಟರ್‌ಗೆ ಎಸಿಎಫ್ ರವಿಕುಮಾರ್ ಮತ್ತು ವಲಯಾರಣ್ಯಾಧಿಕಾರಿ ನವೀನ್ ಕುಮಾರ್ ಭೇಟಿ ಮಾಡಿ ಪರಿಶೀಲಿಸಿದರು.

‘ಮೊದಲ ದಿನ ಹೆಚ್ಚಿನ‍ಪ್ರವಾಸಿಗರು ಬಂದಿರಲಿಲ್ಲ. ದಿನ ಕಳೆದಂತೆ ಜನರ ಸಂಖ್ಯೆ ಹೆಚ್ಚಲಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದಕ್ಕಾಗಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಚಾಮರಾಜನಗರ ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿರುವ ಸಫಾರಿ ಕೇಂದ್ರವೂ ತೆರೆದಿದ್ದು, ಸಫಾರಿ ಸೇವೆ ಆರಂಭವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತೆರೆಯದ ರೆಸಾರ್ಟ್‌ಗಳು: ಗುಂಡ್ಲುಪೇಟೆ, ಬಂಡೀಪುರದ ಸುತ್ತಮುತ್ತಲಿನ ರೆಸಾರ್ಟ್‌ಗಳು ಸೋಮವಾರ ತೆರೆದಿರಲಿಲ್ಲ.

ಭರಚುಕ್ಕಿ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT