ಕಾಡು ಪ್ರಾಣಿಗಳ ಹಾವಳಿಯಿಂದಾಗಿ ಕಾಡಂಚಿನ ರೈತರು ತೊಂದರೆ ಅನುಭವಿಸುತ್ತಾ ಇರುತ್ತಾರೆ. ಇದರಿಂದ ಇಲಾಖೆಯ ಅಧಿಕಾರಿಗಳು ಹಾಗೂ ರೈತರ ನಡುವೆ ಘರ್ಷಣೆ ನಡೆಯುತ್ತಲೇ ಇರುತ್ತದೆ.ಕಳೆದ ವರ್ಷ ಕುರಿ, ಮೇಕೆಗಳ ಮೇಲೆ ಹುಲಿ, ಚಿರತೆ ದಾಳಿ ಮಾಡುತ್ತಿದೆ ಎಂಬ ಕಾರಣದಿಂದ ಕಿಡಿಗೇಡಿಗಳು ಬಂಡೀಪುರದ ವಿವಿಧ ಕಡೆಗಳಲ್ಲಿ ಬೆಂಕಿ ಇಟ್ಟಿದ್ದರು. ಇದರಿಂದ 11 ಸಾವಿರಕ್ಕೂ ಹೆಚ್ಚು ಎಕರೆ ಕಾಡು ಭಸ್ಮವಾಗಿತ್ತು.ಈ ಬಾರಿ ಕಾಳ್ಗಿಚ್ಚು ಉಂಟಾಗಲೇ ಬಾರದು ಎಂದು ಪಣ ತೊಟ್ಟಿರುವ ಅರಣ್ಯ ಇಲಾಖೆ, ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ.