ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಡೀಪುರ: ಹುಲಿ ದಾಳಿಯಲ್ಲಿ ವ್ಯಕ್ತಿ ಸಾವು

Published 12 ಡಿಸೆಂಬರ್ 2023, 7:36 IST
Last Updated 12 ಡಿಸೆಂಬರ್ 2023, 7:36 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಲಯದ ಆಡಿನ ಕಣಿವೆ ಕಾಲೋನಿಯಲ್ಲಿ ಹುಲಿ ದಾಳಿಗೆ‌ ಸಿಕ್ಕಿ ಗ್ರಾಮಸ್ಥರೊಬ್ಬರು ಮೃತಪಟ್ಟಿದ್ದಾರೆ.

ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಅರ್ಧ ದೇಹವನ್ನು ಹುಲಿ ತಿಂದಿದೆ.

ಆಡಿನಕಣಿವೆಯ ಬಸವ(54) ಮೃತಪಟ್ಟ ವ್ಯಕ್ತಿ. ಬುಡಕಟ್ಟು ಸಮುದಾಯಕ್ಕೆ ಸೇರಿದ ಬಸವ ಅವರು ಸೋಮವಾರ ಕುರಿಗಳನ್ನು ಮೇಯಿಸಲು ಕಾಲೊನಿಯ ಕೂಗಳತೆ ದೂರದಲ್ಲಿರುವ ಕಾಡಿಗೆ ತೆರಳಿದ್ದರು. ಆದರೆ ಮನೆಗೆ ವಾಪಸ್ ಆಗಿರಲಿಲ್ಲ.

ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ ಮಂಗಳವಾರ ಬೆಳಿಗ್ಗೆ ಅರಣ್ಯದ ಒಳಗೆ ಅರ್ಧ ದೇಹ ತಿಂದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕುಟುಂಬಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT