<p><strong>ಚಾಮರಾಜನಗರ</strong>: ‘ಬಂಡೀಪುರ, ನಾಗರಹೊಳೆ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಯನ್ನೇ ನಂಬಿ ಬುಡಕಟ್ಟು ಸಮುದಾಯಗಳು ಬದುಕು ಕಟ್ಟಿಕೊಂಡಿವೆ. ಹೀಗಾಗಿ, ಒತ್ತಡಕ್ಕೆ ಮಣಿದು ಸಫಾರಿಯನ್ನು ನಿರ್ಬಂಧಿಸಬಾರದು’ ಎಂದು ಗುಂಡ್ಲುಪೇಟೆ ತಾಲ್ಲೂಕು ಆದಿವಾಸಿ ಮಹಿಳಾ ಸಂಘದ ಅಧ್ಯಕ್ಷೆ ಪುಟ್ಟಮ್ಮ ಒತ್ತಾಯಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹಲವರು ಸಫಾರಿ ಕೌಂಟರ್ಗಳಲ್ಲಿ, ಜೀಪ್ ಚಾಲಕರಾಗಿ ದುಡಿಯುತ್ತಿದ್ದಾರೆ. ರೆಸಾರ್ಟ್, ಹೋಂ ಸ್ಟೇಗಳಲ್ಲಿ ಕಾರ್ಮಿಕರಾಗಿದ್ದಾರೆ. ಸಫಾರಿ ನಿಲ್ಲಿಸಿದರೆ ಎಲ್ಲರ ಬದುಕು ಬೀದಿಗೆ ಬರಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಸಫಾರಿ ಬಂದ್ ಆಗಿದ್ದಾಗ ಹಲವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಈಗ ಮತ್ತೆ ಆರಂಭವಾಗಿರುವುದು ಸಂತಸ ತಂದಿದೆ. ಕೆಲವರು ಆದಿವಾಸಿಗಳ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿರುವುದು ಬೇಸರ ತರಿಸಿದೆ’ ಎಂದರು.</p>.<p>‘ಸಫಾರಿಗೂ ಮಾನವ–ಪ್ರಾಣಿ ಸಂಘರ್ಷಕ್ಕೂ ಸಂಬಂಧವಿಲ್ಲ. ಅರಣ್ಯದಂಚಿನ ಗ್ರಾಮಸ್ಥರು ಹಾಗೂ ಅವರ ಜಾನುವಾರುಗಳ ಮೇಲೆ ಹಿಂದಿನಿಂದಲೂ ಕಾಡುಪ್ರಾಣಿಗಳು ದಾಳಿ ನಡೆಸುತ್ತಿವೆ. ಸಫಾರಿ ಆರಂಭವಾದ ಮೇಲೆ ಸಂಘರ್ಷ ಆರಂಭವಾಗಿಲ್ಲ. ಸಫಾರಿ ನಿಲ್ಲಿಸುವ ಅಗತ್ಯವಿಲ್ಲ’ ಎಂದು ಪ್ರತಿಪಾದಿಸಿದರು.</p>.<p>‘ಪ್ರವಾಸಿಗರಿಗೆ ಅರಣ್ಯ, ವನ್ಯಜೀವಿಗಳ ಸೌಂದರ್ಯ ಸವಿಯಲು ಸಫಾರಿ ಅಗತ್ಯ’ ಎಂದು ಪ್ರತಿಪಾದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ‘ಬಂಡೀಪುರ, ನಾಗರಹೊಳೆ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಯನ್ನೇ ನಂಬಿ ಬುಡಕಟ್ಟು ಸಮುದಾಯಗಳು ಬದುಕು ಕಟ್ಟಿಕೊಂಡಿವೆ. ಹೀಗಾಗಿ, ಒತ್ತಡಕ್ಕೆ ಮಣಿದು ಸಫಾರಿಯನ್ನು ನಿರ್ಬಂಧಿಸಬಾರದು’ ಎಂದು ಗುಂಡ್ಲುಪೇಟೆ ತಾಲ್ಲೂಕು ಆದಿವಾಸಿ ಮಹಿಳಾ ಸಂಘದ ಅಧ್ಯಕ್ಷೆ ಪುಟ್ಟಮ್ಮ ಒತ್ತಾಯಿಸಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಹಲವರು ಸಫಾರಿ ಕೌಂಟರ್ಗಳಲ್ಲಿ, ಜೀಪ್ ಚಾಲಕರಾಗಿ ದುಡಿಯುತ್ತಿದ್ದಾರೆ. ರೆಸಾರ್ಟ್, ಹೋಂ ಸ್ಟೇಗಳಲ್ಲಿ ಕಾರ್ಮಿಕರಾಗಿದ್ದಾರೆ. ಸಫಾರಿ ನಿಲ್ಲಿಸಿದರೆ ಎಲ್ಲರ ಬದುಕು ಬೀದಿಗೆ ಬರಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಸಫಾರಿ ಬಂದ್ ಆಗಿದ್ದಾಗ ಹಲವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಈಗ ಮತ್ತೆ ಆರಂಭವಾಗಿರುವುದು ಸಂತಸ ತಂದಿದೆ. ಕೆಲವರು ಆದಿವಾಸಿಗಳ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿರುವುದು ಬೇಸರ ತರಿಸಿದೆ’ ಎಂದರು.</p>.<p>‘ಸಫಾರಿಗೂ ಮಾನವ–ಪ್ರಾಣಿ ಸಂಘರ್ಷಕ್ಕೂ ಸಂಬಂಧವಿಲ್ಲ. ಅರಣ್ಯದಂಚಿನ ಗ್ರಾಮಸ್ಥರು ಹಾಗೂ ಅವರ ಜಾನುವಾರುಗಳ ಮೇಲೆ ಹಿಂದಿನಿಂದಲೂ ಕಾಡುಪ್ರಾಣಿಗಳು ದಾಳಿ ನಡೆಸುತ್ತಿವೆ. ಸಫಾರಿ ಆರಂಭವಾದ ಮೇಲೆ ಸಂಘರ್ಷ ಆರಂಭವಾಗಿಲ್ಲ. ಸಫಾರಿ ನಿಲ್ಲಿಸುವ ಅಗತ್ಯವಿಲ್ಲ’ ಎಂದು ಪ್ರತಿಪಾದಿಸಿದರು.</p>.<p>‘ಪ್ರವಾಸಿಗರಿಗೆ ಅರಣ್ಯ, ವನ್ಯಜೀವಿಗಳ ಸೌಂದರ್ಯ ಸವಿಯಲು ಸಫಾರಿ ಅಗತ್ಯ’ ಎಂದು ಪ್ರತಿಪಾದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>