<p><strong>ಗುಂಡ್ಲುಪೇಟೆ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದ ಕಾಡಂಚಿನ ಪ್ರದೇಶದಲ್ಲಿ ಒಂದೂವರೆ ತಿಂಗಳಿನಿಂದ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ, 20ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.</p>.<p>ಕೇವಲ ಒಂದೂವರೆ ದಿನದ ಕಾರ್ಯಾಚರಣೆಯಲ್ಲಿ ವ್ಯಾಘ್ರನನ್ನು ಸೆರೆ ಹಿಡಿಯಲಾಗಿದ್ದು, ಅಭಿಮನ್ಯು ಸೇರಿದಂತೆ ಆರು<br />ಸಾಕಾನೆಗಳನ್ನು ಈ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು.</p>.<p>‘ಸೆರೆ ಸಿಕ್ಕಿರುವ ಗಂಡು ಹುಲಿ, 4–5 ವರ್ಷ ವಯಸ್ಸಿನದು. ಎಡಗಾಲಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಮೈಸೂರು ಮೃಗಾಲಯಕ್ಕೆ ಕಳುಹಿಸಲಾಗಿದೆ. ಚೇತರಿಸಿಕೊಂಡ ಬಳಿಕ ಕಾಡಿಗೆ ಬಿಡುವುದರ ಬಗ್ಗೆ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ ನಿರ್ಧರಿಸಲಿದ್ದಾರೆ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸೋಮವಾರ ಮಧ್ಯಾಹ್ನ ನಡೆದಿದ್ದ ಕಾರ್ಯಾಚರಣೆ ಯಶಸ್ಸಾಗಿರಲಿಲ್ಲ. ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆ ಆರಂಭವಾಗಿದ್ದು,11 ಗಂಟೆ ವೇಳೆಗೆ ಇಲಾಖೆ ಸಿಬ್ಬಂದಿ ಅಕ್ರಂ ಹುಲಿಯತ್ತ ಅರಿವಳಿಕೆ ಚುಚ್ಚುಮದ್ದು ಹೊಡೆದರು. ಚುಚ್ಚು<br />ಮದ್ದು ತಗುಲಿದ ವ್ಯಾಘ್ರ ಜಮೀನೊಂದರಲ್ಲಿ ಪ್ರಜ್ಞೆ ತಪ್ಪಿ ಬಿದ್ದಿತು. ನಂತರ ಬಲೆ ಹಾಕಿ ಸೆರೆ ಹಿಡಿಯಲಾಯಿತು.</p>.<p>‘ಮತ್ತೊಂದು ಹುಲಿಯೊಂದಿಗೆ ನಡೆದ ಕಾದಾಟದಲ್ಲಿ ಈ ಹುಲಿ ಗಾಯಗೊಂಡಿರುವ ಸಾಧ್ಯತೆ ಇದೆ. ಕಾಡಿನೊಳಗೆ<br />ಬೇಟೆಯಾಡುವ ಸಾಮರ್ಥ್ಯವನ್ನು ಅದು ಕಳೆದುಕೊಂಡಿತ್ತು. ಹಾಗಾಗಿ, ಕಾಡಂಚಿನ ಗ್ರಾಮದಲ್ಲಿ ಓಡಾಡುತ್ತಾ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು’ ಎಂದು ಬಾಲಚಂದ್ರ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದ ಕಾಡಂಚಿನ ಪ್ರದೇಶದಲ್ಲಿ ಒಂದೂವರೆ ತಿಂಗಳಿನಿಂದ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ, 20ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.</p>.<p>ಕೇವಲ ಒಂದೂವರೆ ದಿನದ ಕಾರ್ಯಾಚರಣೆಯಲ್ಲಿ ವ್ಯಾಘ್ರನನ್ನು ಸೆರೆ ಹಿಡಿಯಲಾಗಿದ್ದು, ಅಭಿಮನ್ಯು ಸೇರಿದಂತೆ ಆರು<br />ಸಾಕಾನೆಗಳನ್ನು ಈ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು.</p>.<p>‘ಸೆರೆ ಸಿಕ್ಕಿರುವ ಗಂಡು ಹುಲಿ, 4–5 ವರ್ಷ ವಯಸ್ಸಿನದು. ಎಡಗಾಲಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಮೈಸೂರು ಮೃಗಾಲಯಕ್ಕೆ ಕಳುಹಿಸಲಾಗಿದೆ. ಚೇತರಿಸಿಕೊಂಡ ಬಳಿಕ ಕಾಡಿಗೆ ಬಿಡುವುದರ ಬಗ್ಗೆ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ ನಿರ್ಧರಿಸಲಿದ್ದಾರೆ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸೋಮವಾರ ಮಧ್ಯಾಹ್ನ ನಡೆದಿದ್ದ ಕಾರ್ಯಾಚರಣೆ ಯಶಸ್ಸಾಗಿರಲಿಲ್ಲ. ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆ ಆರಂಭವಾಗಿದ್ದು,11 ಗಂಟೆ ವೇಳೆಗೆ ಇಲಾಖೆ ಸಿಬ್ಬಂದಿ ಅಕ್ರಂ ಹುಲಿಯತ್ತ ಅರಿವಳಿಕೆ ಚುಚ್ಚುಮದ್ದು ಹೊಡೆದರು. ಚುಚ್ಚು<br />ಮದ್ದು ತಗುಲಿದ ವ್ಯಾಘ್ರ ಜಮೀನೊಂದರಲ್ಲಿ ಪ್ರಜ್ಞೆ ತಪ್ಪಿ ಬಿದ್ದಿತು. ನಂತರ ಬಲೆ ಹಾಕಿ ಸೆರೆ ಹಿಡಿಯಲಾಯಿತು.</p>.<p>‘ಮತ್ತೊಂದು ಹುಲಿಯೊಂದಿಗೆ ನಡೆದ ಕಾದಾಟದಲ್ಲಿ ಈ ಹುಲಿ ಗಾಯಗೊಂಡಿರುವ ಸಾಧ್ಯತೆ ಇದೆ. ಕಾಡಿನೊಳಗೆ<br />ಬೇಟೆಯಾಡುವ ಸಾಮರ್ಥ್ಯವನ್ನು ಅದು ಕಳೆದುಕೊಂಡಿತ್ತು. ಹಾಗಾಗಿ, ಕಾಡಂಚಿನ ಗ್ರಾಮದಲ್ಲಿ ಓಡಾಡುತ್ತಾ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು’ ಎಂದು ಬಾಲಚಂದ್ರ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>