ದೇಶದಲ್ಲಿ ಹುಲಿಗಳ ಸಂರಕ್ಷಣೆಯ ಉದ್ದೇಶದಿಂದ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದ್ದ ಈ ನಿರ್ಧಾರದಿಂದಾಗಿ, ಕಾಡುಗಳ ವಿಸ್ತೀರ್ಣ ಕಿರಿದಾಗುತ್ತಾ, ಜನರ ಸಂಖ್ಯೆ ಹೆಚ್ಚಾಗುತ್ತಿರುವ ಇಂದಿನ ಸಂದರ್ಭದಲ್ಲೂ ಹುಲಿಗಳನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ಹೇಳುತ್ತಾರೆ ಪರಿಸರ ತಜ್ಞರು ಹಾಗೂ ವನ್ಯಜೀವಿ ಪ್ರೇಮಿಗಳು.