ಗುಂಡ್ಲುಪೇಟೆ: ರೈತನ ಮೇಲೆ ದಾಳಿ ನಡೆಸಿ ಕೊಂದಿರುವ ಹುಲಿ ಯ ವಿರುದ್ಧ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
ಮಹಾರಾಷ್ಟ್ರದಲ್ಲಿ ಹೆಣ್ಣು ಹುಲಿ ಅವನಿಯನ್ನು ಕೊಂದಿದ್ದ ಹೈದರಾಬಾದ್ ನ ಅಸ್ಗರ್ ಅಲಿ ಹಾಗೂ ಅವರ ತಂದೆ ಶಫತ್ ಅಲಿ ಖಾನ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆನೆಗಳನ್ನು ಬಳಸಿ ಕಾರ್ಯಾಚರಣೆ ಮಾಡಲಾಗುತ್ತಿದೆ.
ಸದ್ಯ ಬಂಡೀಪುರ ವ್ಯಾಪ್ತಿ ಯಲ್ಲಿ ಮಳೆಬರುತ್ತಿದ್ದು ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಆಕ್ಷೇಪ: ಹುಲಿಯನ್ನು ಸೆರೆಹಿಡಿಯಲು ಸಾಧ್ಯವಾಗದಿದ್ದರೆ ಕೊಲ್ಲಲು ನಿರ್ಧರಿಸಲಾಗಿದೆ ಎಂಬ ಅರಣ್ಯ ಇಲಾಖೆಯ ಹೇಳಿಕೆಗೆ ವನ್ಯಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.
ಕೊಲ್ಲುವುದಿಲ್ಲ, ಹುಲಿಯನ್ನು ಸೆರೆಹಿಡಿಯುತ್ತೇವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಹುಲಿಯನ್ನು ಕೊಲ್ಲುವುದಿದ್ದರೆ ಇಷ್ಟು ದಿನ ಕಾಯುತ್ತಿರಲಿಲ್ಲ. ಸೆರೆ ಹಿಡಿಯುವುತ್ತೇವೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ಹೇಳಿದ್ದಾರೆ.
ಪರಿಹಾರ ವಿತರಣೆ: ಈ ಮಧ್ಯೆ ಹುಲಿ ದಾಳಿಯಿಂದ ಮೃತಪಟ್ಟ ರೈತ ಶಿವಲಿಂಗಪ್ಪ ಅವರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿವರಿಸಲಾಗಿದೆ. ಮಗನಿಗೆ ಉದ್ಯೋಗ ಕೊಡುವ ಭರವಸೆಯನ್ನೂ ಬಾಲಚಂದ್ರ ಅವರು ನೀಡಿದ್ದಾರೆ.