<p><strong>ಚಾಮರಾಜನಗರ</strong>: ಕೋವಿಡ್ ಕಾರಣದಿಂದಾಗಿ ಸತತ 2ನೇ ವರ್ಷವೂ ಬಸವ ಜಯಂತಿಯನ್ನು ಜಿಲ್ಲೆಯಲ್ಲಿ ಅತ್ಯಂತ ಸರಳವಾಗಿ ಆಚರಿಸಲಾಯಿತು.</p>.<p>ಇಲ್ಲಿನ ಸಿದ್ಧಮಲ್ಲೇಶ್ವರ ವಿರಕ್ತ ಮಠದಲ್ಲಿ ಶುಕ್ರವಾರ ಚನ್ನಬಸವ ಸ್ವಾಮೀಜಿ ಅವರು ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಬಸವ ಜಯಂತಿಯನ್ನು ಆಚರಿಸಿದರು. ಈ ವೇಳೆ ಕೆಲವೇ ಕೆಲವು ಮಂದಿಯಷ್ಟೇ ಹಾಜರಿದ್ದರು. ಕೋವಿಡ್ ಕಾರಣದಿಂದಾಗಿ ಹೆಚ್ಚಿನ ಮಂದಿಗೆ ಆಹ್ವಾನ ನೀಡಿರಲಿಲ್ಲ.</p>.<p>ನಂತರ ಮಾತನಾಡಿದ ಚನ್ನಬಸವ ಸ್ವಾಮೀಜಿ, ಬಸವ ಜಯಂತಿಯ ಹೇಳಿದರು.</p>.<p>‘ಪ್ರಸ್ತುತ ಕೊರೊನಾ ವೈರಸ್ ಎಲ್ಲೆಡೆ ಆತಂಕ ಸೃಷ್ಟಿಸಿದೆ. ‘ಕೊಲುವೆನೆಂಬ ಭಾಷೆ ದೇವನದು ಗೆಲುವೆನೆಂಬ ಭಾಷೆ ಭಕ್ತನದು’ ಎಂಬ ವಚನದಂತೆ ಎಲ್ಲರೂ ಗೆಲುವು ಸಾಧಿಸುತ್ತೇವೆ ಎಂಬ ಆತ್ಮಸ್ಥೈರ್ಯ ತಂದು ಕೊಳ್ಳಬೇಕು. ಸರ್ಕಾರದ ನಿಯಮಗಳನ್ನು ಪಾಲಿಸಿ, ಮಾಸ್ಕ್ ಹಾಕಿಕೊಂಡು, ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಈ ಮೂಲಕ ಕೊರೊನಾ ಮುಕ್ತ ಕರ್ನಾಟಕ ನಿರ್ಮಾಣವಾಗಲು ಪಣತೊಡಬೇಕು’ ಎಂದು ಕರೆ ನೀಡಿದರು.</p>.<p>‘ಇವನಾರವ ಇವನಾರವ ಎನ್ನಿಸದೇ ಇವನಮ್ಮವ ಇವನಮ್ಮವ ಎಂದೆನಿಸಯ್ಯ’ ಎಂದು ಬಸವಣ್ಣನವರು ಹೇಳಿದಂತೆ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಮೇಲು ಕೀಳಿನ ವಿರುದ್ಧ ಹೋರಾಡಿದ ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.</p>.<p>ಪ್ರತಿವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬರುತ್ತಿದ್ದರು. ಪಾನಕ, ಮಜ್ಜಿಗೆ, ಪ್ರಸಾದ ವಿತರಣೆ ನಡೆಯುತ್ತಿತ್ತು. ಹಲವು ಗ್ರಾಮಗಳಲ್ಲಿ ಬಸವಣ್ಣನವರ ಭಾವಚಿತ್ರ ಇಟ್ಟು ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಗುತ್ತಿತ್ತು. ಆದರೆ, ಕಳೆದ ಬಾರಿ ಮತ್ತು ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದ ಸರಳವಾಗಿ ಆಚರಣೆ ನಡೆಯುತ್ತಿದೆ.</p>.<p>ಕೆಲವು ಗ್ರಾಮಗಳಲ್ಲಿರುವ ಬಸವೇಶ್ವರ ದೇಗುಲಗಳಲ್ಲಿ ಸರಳವಾಗಿ ಬಸವ ಜಯಂತಿಯನ್ನು ಆಚರಿಸಲಾಯಿತು.</p>.<p class="Briefhead"><strong>ಯುವ ವೇದಿಕೆಯಿಂದ ಆಚರಣೆ<br />ಚಾಮರಾಜನಗರ: </strong>ಕಾಯಕ ತತ್ವದ ಮೂಲಕ ಸಮ ಸಮಾಜ ನಿರ್ಮಿಸಿದ ಮಹಾನ್ ಜ್ಞಾನಿ ಬಸವಣ್ಣನವರು ಎಂದು ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಅಧ್ಯಕ್ಷ ಅರಳಿಕಟ್ಟೆ ಗುರುಮಲ್ಲಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಅರಳಿಕಟ್ಟೆ ಗ್ರಾಮದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಶುಕ್ರವಾರ ಸರಳವಾಗಿ ನಡೆದ ವಿಶ್ವಗುರು ಬಸವಣ್ಣ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾಜವನ್ನು ತಿದ್ದಿದ ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿ ಸಮಾನತೆ ಬಗ್ಗೆ ವಿಶ್ವಕ್ಕೆ ಮಾದರಿಯಾದರು. ಅವರ ತತ್ವ, ವಚನಗಳು ಸಾರ್ವಕಾಲಿಕ ಮೌಲ್ಯಗ ಳಾಗಿದ್ದು, ಅದನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ತಿಳಿಸಿದರು.</p>.<p>ಬಸವ ಜಯಂತಿ ಅಂಗವಾಗಿ ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ಜಾಗೃತಿ ಸಹ ಮೂಡಿಸಲಾಯಿತು.</p>.<p>ಕುಲಗಾಣ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹೇಂದ್ರ, ಸದಸ್ಯರಾದ ದೊರೆಸ್ವಾಮಿ, ಸವಿತಾ ಮಹದೇವಸ್ವಾಮಿ, ಜಿಲ್ಲಾ ಸಂಚಾಲಕರಾದ ಬಿ.ಪ್ರಕಾಶ್, ಆನಂದ್, ಮಹೇಶ್, ಮಲ್ಲೇಶ್, ರವಿ, ಚೇತನ್, ಮಹಿ, ಜಯಪ್ಪ, ಸ್ವಾಮಿ, ನಾಗೇಂದ್ರ, ರೈತ ಸಂಘದ ರೇಚಣ್ಣ ಇದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<p class="Briefhead"><strong>ಕೊಳ್ಳೇಗಾಲ ವರದಿ<br />ಕೊಳ್ಳೇಗಾಲ: </strong>ಪಟ್ಟಣದಲ್ಲಿ ಶುಕ್ರವಾರ ಬಸವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆಶಾಸಕ ಎನ್.ಮಹೇಶ್ ಅವರು ನಮನ ಸಲ್ಲಿಸಿದರು.</p>.<p>ನಂತರ ಮಾತನಾಡಿದ ಶಾಸಕರು, ‘ಮಹಾನ್ ಚೇತನ ಬಸವಣ್ಣನವರು 12ನೇ ಶತಮಾನದಲ್ಲಿ ಅಸಮಾನತೆ ವಿರುದ್ಧ ಹೋರಾಟ ನಡೆಸಿ ಎಲ್ಲರ ನಡುವೆ ಸಮಾನತೆ ತಂದರು’ ಎಂದು ಹೇಳಿದರು.</p>.<p>‘ಪ್ರತಿಯೊಬ್ಬರೂ ಅಂತರ ಕಾಯ್ದು ಕೊಂಡು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ನಗರಸಭೆ ಸದಸ್ಯ ರಾಮಕೃಷ್ಣ, ನಟರಾಜು, ಮುಖಂಡ ಜಗದೀಶ್, ವೀರಭದ್ರಸ್ವಾಮಿ, ಮಲ್ಲಿಕ್, ಸೋಮಣ್ಣ ಉಪ್ಪಾರ್, ಸ್ವಾಮಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಕೋವಿಡ್ ಕಾರಣದಿಂದಾಗಿ ಸತತ 2ನೇ ವರ್ಷವೂ ಬಸವ ಜಯಂತಿಯನ್ನು ಜಿಲ್ಲೆಯಲ್ಲಿ ಅತ್ಯಂತ ಸರಳವಾಗಿ ಆಚರಿಸಲಾಯಿತು.</p>.<p>ಇಲ್ಲಿನ ಸಿದ್ಧಮಲ್ಲೇಶ್ವರ ವಿರಕ್ತ ಮಠದಲ್ಲಿ ಶುಕ್ರವಾರ ಚನ್ನಬಸವ ಸ್ವಾಮೀಜಿ ಅವರು ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಬಸವ ಜಯಂತಿಯನ್ನು ಆಚರಿಸಿದರು. ಈ ವೇಳೆ ಕೆಲವೇ ಕೆಲವು ಮಂದಿಯಷ್ಟೇ ಹಾಜರಿದ್ದರು. ಕೋವಿಡ್ ಕಾರಣದಿಂದಾಗಿ ಹೆಚ್ಚಿನ ಮಂದಿಗೆ ಆಹ್ವಾನ ನೀಡಿರಲಿಲ್ಲ.</p>.<p>ನಂತರ ಮಾತನಾಡಿದ ಚನ್ನಬಸವ ಸ್ವಾಮೀಜಿ, ಬಸವ ಜಯಂತಿಯ ಹೇಳಿದರು.</p>.<p>‘ಪ್ರಸ್ತುತ ಕೊರೊನಾ ವೈರಸ್ ಎಲ್ಲೆಡೆ ಆತಂಕ ಸೃಷ್ಟಿಸಿದೆ. ‘ಕೊಲುವೆನೆಂಬ ಭಾಷೆ ದೇವನದು ಗೆಲುವೆನೆಂಬ ಭಾಷೆ ಭಕ್ತನದು’ ಎಂಬ ವಚನದಂತೆ ಎಲ್ಲರೂ ಗೆಲುವು ಸಾಧಿಸುತ್ತೇವೆ ಎಂಬ ಆತ್ಮಸ್ಥೈರ್ಯ ತಂದು ಕೊಳ್ಳಬೇಕು. ಸರ್ಕಾರದ ನಿಯಮಗಳನ್ನು ಪಾಲಿಸಿ, ಮಾಸ್ಕ್ ಹಾಕಿಕೊಂಡು, ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಈ ಮೂಲಕ ಕೊರೊನಾ ಮುಕ್ತ ಕರ್ನಾಟಕ ನಿರ್ಮಾಣವಾಗಲು ಪಣತೊಡಬೇಕು’ ಎಂದು ಕರೆ ನೀಡಿದರು.</p>.<p>‘ಇವನಾರವ ಇವನಾರವ ಎನ್ನಿಸದೇ ಇವನಮ್ಮವ ಇವನಮ್ಮವ ಎಂದೆನಿಸಯ್ಯ’ ಎಂದು ಬಸವಣ್ಣನವರು ಹೇಳಿದಂತೆ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಮೇಲು ಕೀಳಿನ ವಿರುದ್ಧ ಹೋರಾಡಿದ ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.</p>.<p>ಪ್ರತಿವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬರುತ್ತಿದ್ದರು. ಪಾನಕ, ಮಜ್ಜಿಗೆ, ಪ್ರಸಾದ ವಿತರಣೆ ನಡೆಯುತ್ತಿತ್ತು. ಹಲವು ಗ್ರಾಮಗಳಲ್ಲಿ ಬಸವಣ್ಣನವರ ಭಾವಚಿತ್ರ ಇಟ್ಟು ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಗುತ್ತಿತ್ತು. ಆದರೆ, ಕಳೆದ ಬಾರಿ ಮತ್ತು ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದ ಸರಳವಾಗಿ ಆಚರಣೆ ನಡೆಯುತ್ತಿದೆ.</p>.<p>ಕೆಲವು ಗ್ರಾಮಗಳಲ್ಲಿರುವ ಬಸವೇಶ್ವರ ದೇಗುಲಗಳಲ್ಲಿ ಸರಳವಾಗಿ ಬಸವ ಜಯಂತಿಯನ್ನು ಆಚರಿಸಲಾಯಿತು.</p>.<p class="Briefhead"><strong>ಯುವ ವೇದಿಕೆಯಿಂದ ಆಚರಣೆ<br />ಚಾಮರಾಜನಗರ: </strong>ಕಾಯಕ ತತ್ವದ ಮೂಲಕ ಸಮ ಸಮಾಜ ನಿರ್ಮಿಸಿದ ಮಹಾನ್ ಜ್ಞಾನಿ ಬಸವಣ್ಣನವರು ಎಂದು ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಅಧ್ಯಕ್ಷ ಅರಳಿಕಟ್ಟೆ ಗುರುಮಲ್ಲಪ್ಪ ತಿಳಿಸಿದರು.</p>.<p>ತಾಲ್ಲೂಕಿನ ಅರಳಿಕಟ್ಟೆ ಗ್ರಾಮದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಶುಕ್ರವಾರ ಸರಳವಾಗಿ ನಡೆದ ವಿಶ್ವಗುರು ಬಸವಣ್ಣ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾಜವನ್ನು ತಿದ್ದಿದ ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿ ಸಮಾನತೆ ಬಗ್ಗೆ ವಿಶ್ವಕ್ಕೆ ಮಾದರಿಯಾದರು. ಅವರ ತತ್ವ, ವಚನಗಳು ಸಾರ್ವಕಾಲಿಕ ಮೌಲ್ಯಗ ಳಾಗಿದ್ದು, ಅದನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ತಿಳಿಸಿದರು.</p>.<p>ಬಸವ ಜಯಂತಿ ಅಂಗವಾಗಿ ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕೊರೊನಾ ಜಾಗೃತಿ ಸಹ ಮೂಡಿಸಲಾಯಿತು.</p>.<p>ಕುಲಗಾಣ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹೇಂದ್ರ, ಸದಸ್ಯರಾದ ದೊರೆಸ್ವಾಮಿ, ಸವಿತಾ ಮಹದೇವಸ್ವಾಮಿ, ಜಿಲ್ಲಾ ಸಂಚಾಲಕರಾದ ಬಿ.ಪ್ರಕಾಶ್, ಆನಂದ್, ಮಹೇಶ್, ಮಲ್ಲೇಶ್, ರವಿ, ಚೇತನ್, ಮಹಿ, ಜಯಪ್ಪ, ಸ್ವಾಮಿ, ನಾಗೇಂದ್ರ, ರೈತ ಸಂಘದ ರೇಚಣ್ಣ ಇದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<p class="Briefhead"><strong>ಕೊಳ್ಳೇಗಾಲ ವರದಿ<br />ಕೊಳ್ಳೇಗಾಲ: </strong>ಪಟ್ಟಣದಲ್ಲಿ ಶುಕ್ರವಾರ ಬಸವ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆಶಾಸಕ ಎನ್.ಮಹೇಶ್ ಅವರು ನಮನ ಸಲ್ಲಿಸಿದರು.</p>.<p>ನಂತರ ಮಾತನಾಡಿದ ಶಾಸಕರು, ‘ಮಹಾನ್ ಚೇತನ ಬಸವಣ್ಣನವರು 12ನೇ ಶತಮಾನದಲ್ಲಿ ಅಸಮಾನತೆ ವಿರುದ್ಧ ಹೋರಾಟ ನಡೆಸಿ ಎಲ್ಲರ ನಡುವೆ ಸಮಾನತೆ ತಂದರು’ ಎಂದು ಹೇಳಿದರು.</p>.<p>‘ಪ್ರತಿಯೊಬ್ಬರೂ ಅಂತರ ಕಾಯ್ದು ಕೊಂಡು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು’ ಎಂದು ಸಲಹೆ ನೀಡಿದರು.</p>.<p>ನಗರಸಭೆ ಸದಸ್ಯ ರಾಮಕೃಷ್ಣ, ನಟರಾಜು, ಮುಖಂಡ ಜಗದೀಶ್, ವೀರಭದ್ರಸ್ವಾಮಿ, ಮಲ್ಲಿಕ್, ಸೋಮಣ್ಣ ಉಪ್ಪಾರ್, ಸ್ವಾಮಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>