<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಚಿರಕನಹಳ್ಳಿಯಲ್ಲಿ ಶ್ರೀ ಬಸವೇಶ್ವರ ಕಾಯಿ ಹಬ್ಬ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ದೇವರನ್ನು ಪಲ್ಲಕ್ಕಿಯಲ್ಲಿ ಸೋಮವಾರ ರಾತ್ರಿ ಮೆರವಣಿಗೆ ಮಾಡಲಾಯಿತು. ಭಕ್ತರು ದೇವರಿಗೆ ವಿವಿಧ ನೈವೇದ್ಯಗಳನ್ನು ಅರ್ಪಿಸುವ ಮೂಲಕ ಹರಕೆಗಳನ್ನು ತಿರಿಸಿದರು. ಹಲವು ವರ್ಷಗಳಿಂದಲೂ ಕಾಯಿ ಹೊಡೆಯುವುದು ಜಾತ್ರೆಯ ವಿಶೇಷವಾಗಿದ್ದು, ಮೆರವಣಿಗೆ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಾಯಿಯನ್ನು ಸುತ್ತಿಸಿ ದೇವಾಲಯದ ಬಳಿ ಬಂದ ನಂತರ ಹೊಡೆಯಲಾಗುತ್ತದೆ. ಈ ವೇಳೆ ನಾರು ಕಟ್ಟಿ ಕಾಯಿ ಎಸೆಯುವವರು ಮತ್ತು ಕಾಯಿ ಹೊಡೆಯುವವರ ಉತ್ಸಾಹ ಇಮ್ಮಡಿಗೊಂಡಿತು. ಸಂಗೀತ ರಸಮಂಜರಿ ಕಾರ್ಯಕ್ರಮ ಏರ್ಪಡಿಸಿದ್ದರಿಂದ ಜಾತ್ರೆಗೆ ಮತ್ತಷ್ಟು ಮೆರಗು ತಂದಿತು.</p>.<p>ಹಬ್ಬದ ನಿಮಿತ್ತ ಗ್ರಾಮದ ಬೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ಮಂಗಳವಾರ ಬೆಳಿಗ್ಗೆ ದೇವರ ಮೆರವಣಿಗೆ ಮಾಡಿ, ಪೂಜೆ ಸಲ್ಲಿಸಿದ ಗ್ರಾಮಸ್ಥರು ಹಣ್ಣು ಕಾಯಿ ಹೂವನ್ನು ಅರ್ಪಿಸಿದರು. ದೇವಾಲಯದ ಆವರಣದಲ್ಲಿ ತೇರನ್ನು ಮೂರು ಸುತ್ತು ಪ್ರದಕ್ಷಣೆ ಮಾಡಿ ಹಬ್ಬವನ್ನು ಕೊನೆಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಚಿರಕನಹಳ್ಳಿಯಲ್ಲಿ ಶ್ರೀ ಬಸವೇಶ್ವರ ಕಾಯಿ ಹಬ್ಬ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರ ದೇವರನ್ನು ಪಲ್ಲಕ್ಕಿಯಲ್ಲಿ ಸೋಮವಾರ ರಾತ್ರಿ ಮೆರವಣಿಗೆ ಮಾಡಲಾಯಿತು. ಭಕ್ತರು ದೇವರಿಗೆ ವಿವಿಧ ನೈವೇದ್ಯಗಳನ್ನು ಅರ್ಪಿಸುವ ಮೂಲಕ ಹರಕೆಗಳನ್ನು ತಿರಿಸಿದರು. ಹಲವು ವರ್ಷಗಳಿಂದಲೂ ಕಾಯಿ ಹೊಡೆಯುವುದು ಜಾತ್ರೆಯ ವಿಶೇಷವಾಗಿದ್ದು, ಮೆರವಣಿಗೆ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಾಯಿಯನ್ನು ಸುತ್ತಿಸಿ ದೇವಾಲಯದ ಬಳಿ ಬಂದ ನಂತರ ಹೊಡೆಯಲಾಗುತ್ತದೆ. ಈ ವೇಳೆ ನಾರು ಕಟ್ಟಿ ಕಾಯಿ ಎಸೆಯುವವರು ಮತ್ತು ಕಾಯಿ ಹೊಡೆಯುವವರ ಉತ್ಸಾಹ ಇಮ್ಮಡಿಗೊಂಡಿತು. ಸಂಗೀತ ರಸಮಂಜರಿ ಕಾರ್ಯಕ್ರಮ ಏರ್ಪಡಿಸಿದ್ದರಿಂದ ಜಾತ್ರೆಗೆ ಮತ್ತಷ್ಟು ಮೆರಗು ತಂದಿತು.</p>.<p>ಹಬ್ಬದ ನಿಮಿತ್ತ ಗ್ರಾಮದ ಬೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ಮಂಗಳವಾರ ಬೆಳಿಗ್ಗೆ ದೇವರ ಮೆರವಣಿಗೆ ಮಾಡಿ, ಪೂಜೆ ಸಲ್ಲಿಸಿದ ಗ್ರಾಮಸ್ಥರು ಹಣ್ಣು ಕಾಯಿ ಹೂವನ್ನು ಅರ್ಪಿಸಿದರು. ದೇವಾಲಯದ ಆವರಣದಲ್ಲಿ ತೇರನ್ನು ಮೂರು ಸುತ್ತು ಪ್ರದಕ್ಷಣೆ ಮಾಡಿ ಹಬ್ಬವನ್ನು ಕೊನೆಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>