‘ಎಂಟು ವಿದ್ಯಾರ್ಥಿಗಳಿಗೆ ಒಂದೆರಡು ಜೇನುಗಳು ಕಡಿದಿವೆ. ಒಬ್ಬ ವಿದ್ಯಾರ್ಥಿಗೆ ಮಾತ್ರ ಸ್ವಲ್ಪ ಹೆಚ್ಚು ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ’ ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.