<p><strong>ಗುಂಡ್ಲುಪೇಟೆ:</strong> ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಶ್ರೀರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಸೋಮವಾರದ ಪ್ರಯುಕ್ತ ಶಿವನ ಮೂರ್ತಿಗೆ ವೀಳ್ಯದೆಲೆ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.</p>.<p>ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆಯೇ ದೇವರ ಮೂರ್ತಿಗೆ ಗಂಧ, ವಿಭೂತಿ, ಎಳನೀರು, ಮೊಸರು, ಹಾಲು, ತುಪ್ಪ ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳನ್ನು ನೆರವೇರಿಸಿ, ವಿಶೇಷವಾಗಿ ವೀಳ್ಯದೆಲೆಯಲ್ಲಿ ಅಲಂಕಾರವನ್ನು ಅರ್ಚಕ ಶಂಕರ ನಾರಾಯಣ ಜೋಯಿಸಿ ಅವರು ಮಾಡಿದರು.</p>.<p>ಪಟ್ಟಣದ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಮಹಿಳೆಯರು ಆಗಮಿಸಿ, ದೇವರಿಗೆ ಪೂಜೆ ಸಲ್ಲಿಸಿ, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.</p>.<p>ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಕಾರ್ತಿಕ ಸೋಮವಾರದ ಪ್ರಯುಕ್ತ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗ ಸಹ ಏರ್ಪಡಿಸಲಾಗಿತ್ತು.</p>.<p>‘ಕಾರ್ತಿಕ ಮಾಸದ ಪ್ರತಿ ಸೋಮವಾರ ಶಿವನ ಮೂರ್ತಿಗೆ ವಿವಿಧ ಬಗೆಯ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಗುವುದು’ ಎಂದು ಅರ್ಚಕ ಶಂಕರ ನಾರಾಯಣ ಜೋಯಿಸಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಶ್ರೀರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಸೋಮವಾರದ ಪ್ರಯುಕ್ತ ಶಿವನ ಮೂರ್ತಿಗೆ ವೀಳ್ಯದೆಲೆ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.</p>.<p>ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆಯೇ ದೇವರ ಮೂರ್ತಿಗೆ ಗಂಧ, ವಿಭೂತಿ, ಎಳನೀರು, ಮೊಸರು, ಹಾಲು, ತುಪ್ಪ ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳನ್ನು ನೆರವೇರಿಸಿ, ವಿಶೇಷವಾಗಿ ವೀಳ್ಯದೆಲೆಯಲ್ಲಿ ಅಲಂಕಾರವನ್ನು ಅರ್ಚಕ ಶಂಕರ ನಾರಾಯಣ ಜೋಯಿಸಿ ಅವರು ಮಾಡಿದರು.</p>.<p>ಪಟ್ಟಣದ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಮಹಿಳೆಯರು ಆಗಮಿಸಿ, ದೇವರಿಗೆ ಪೂಜೆ ಸಲ್ಲಿಸಿ, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.</p>.<p>ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಕಾರ್ತಿಕ ಸೋಮವಾರದ ಪ್ರಯುಕ್ತ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗ ಸಹ ಏರ್ಪಡಿಸಲಾಗಿತ್ತು.</p>.<p>‘ಕಾರ್ತಿಕ ಮಾಸದ ಪ್ರತಿ ಸೋಮವಾರ ಶಿವನ ಮೂರ್ತಿಗೆ ವಿವಿಧ ಬಗೆಯ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಗುವುದು’ ಎಂದು ಅರ್ಚಕ ಶಂಕರ ನಾರಾಯಣ ಜೋಯಿಸಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>