ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಗೀರಥ’ ಪ್ರಯತ್ನದಿಂದ ಯಶಸ್ಸು ಸಾಧ್ಯ: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ

ಭಗೀರಥ ಜಯಂತಿ
Last Updated 11 ಮೇ 2019, 14:00 IST
ಅಕ್ಷರ ಗಾತ್ರ

ಚಾಮರಾಜನಗರ: ‘ಎಲ್ಲರೂ ತಮ್ಮ ಬದುಕಿನ ಗುರಿ ಮುಟ್ಟಬೇಕಾದರೆ ಅಲ್ಲಿ‘ಭಗೀರಥ’ ಪ್ರಯತ್ನ ಇರಬೇಕು. ಭಗೀರಥರಿಗೆ ಅಂತಹ ಛಲವಿದ್ದುದರಿಂದ ಭೂಮಿಗೆ ಗಂಗೆಯನ್ನು ಕರೆಸಿದರು’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯಪಟ್ಟರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿಶನಿವಾರಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜೀವನದಲ್ಲಿ ಸಾಧನೆ ಮಾಡಬೇಕಾದರೆ ಮಹರ್ಷಿ ಭಗೀರಥರ ಪ್ರಯತ್ನ ಅನುಸರಿಸಬೇಕು. ಸತತ ಪ್ರಯತ್ನಕ್ಕೆ ಪ್ರತಿಫಲ ಸಿಗಲಿದೆ ಎನ್ನುವುದಕ್ಕೆ ಗಂಗೆಯನ್ನೇ ಧರೆಗಿಳಿಸಿದ ಭಗೀರಥರೇ ಉತ್ತಮ ಉದಾಹರಣೆ ಎಂದರು.

ಛಲಬಿಡದ ಭಗೀರಥ: ಭಗೀರಥರು ಸಾವಿರಾರು ವರ್ಷ ತಪಸ್ಸು ಮಾಡಿ ಆಹಾರ, ಗಾಳಿತ್ಯಜಿಸಿ ಭೂಮಿಯನ್ನು ಪವಿತ್ರಗೊಳಿಸುವ ಉದ್ದೇಶದಿಂದಯಾವುದೇಅಡೆತಡೆ ಎದುರಾದರೂಛಲ ಬಿಡದೆ ಗಂಗೆಯನ್ನು ಭೂಮಿಗೆ ಕರೆತಂದರು. ಅಂತಹಪ್ರಯತ್ನವನ್ನು ನಾವು ಕೂಡನಮ್ಮ ಪಾರದರ್ಶಕ ಕೆಲಸದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್.ಲತಾಕುಮಾರಿ ಮಾತನಾಡಿ, ‘ದಾರ್ಶನಿಕರ ಸಾಧನೆ ಅವರು ನಡೆದು ಬಂದ ಕಷ್ಟಗಳ ಹಾದಿಯನ್ನು ತಿಳಿಸುತ್ತದೆ. ಮಹಾರಾಜರಾಗಿದ್ದ ಭಗೀರಥರು ತ್ಯಾಗ, ಹಟ, ಛಲದಿಂದ ಸಾಧನೆ ಮಾಡಿದರು. ಪ್ರತಿಯೊಬ್ಬರೂ ತಮ್ಮಗುರಿ ಮುಟ್ಟಲು ಅಥವಾ ಸಾಧನೆ ಮಾಡಲು ಭಗೀರಥರ ಸತತ ಪರಿಶ್ರಮ, ತ್ಯಾಗ, ಛಲ, ಸದ್ಗುಣಗಳನ್ನು ಅನುಸರಿಸಬೇಕು.ಎಲ್ಲ ದಾರ್ಶನಿಕರಜೀವನ ಚರಿತ್ರೆ, ಜೀವನಗಾಥೆ, ಮೌಲ್ಯವನ್ನು ಪ್ರತಿಯೊಬ್ಬರೂಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಮಾತನಾಡಿ, ‘ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಿಷ್ಠೆಯಿಂದ ಕೆಲಸ ನಿರ್ವಹಿಸಿದರೆ ದೇಶ ಅಭಿವೃದ್ಧಿಯಾಗುತ್ತದೆ. ಸತತ ಪ್ರಯತ್ನದಿಂದ ರೈತರು ಉತ್ತಮ ಫಸಲು ಬೆಳೆಯುತ್ತಾರೆ. ಅದರಂತೆ, ಅಧಿಕಾರಿಗಳು ಸೇರಿದಂತೆ ಎಲ್ಲರೂ ತಮ್ಮ ವೃತ್ತಿಯಲ್ಲಿ ಕುಗ್ಗದೆ ಕೆಲಸ ನಿರ್ವಹಿಸಿದರೆ ಸಮಾಜ ಅಭಿವೃದ್ಧಿಯಾಗುತ್ತದೆ’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋಮಶೇಖರ್ ಇದ್ದರು.

ಪವಿತ್ರಗಂಗೆ ಕಲುಷಿತಗೊಂಡಿದ್ದಾಳೆ

ಕಥೆ, ಪುರಾಣ, ಇತಿಹಾಸದಿಂದಎಲ್ಲರೂಕಲಿಯಬೇಕಾದ್ದು ಬಹಳಷ್ಟಿದೆ. ಎಲ್ಲವನ್ನೂ ಅರ್ಥೈಸಿಕೊಳ್ಳಬೇಕು.ಭಗೀರಥ ಮಹರ್ಷಿ ಗಂಗೆಯನ್ನು ಭೂಮಿಗೆ ಏಕೆ ತಂದರು ಎನ್ನುವ ಅರಿವಿರಬೇಕು.ಆದರೆ, ಇಂದು ನಾವುಆಗಂಗೆಯಮೌಲ್ಯ ತಿಳಿದಿದ್ದರೂ ಪವಿತ್ರವಾದ ನೀರನ್ನು (ಗಂಗೆ) ಕಲುಷಿತಗೊಳಿಸಿರುವುದುದುರಂತದ ಸಂಗತಿ. ನೀರಿನ ಮಹತ್ವವನ್ನು ಎಲ್ಲರೂ ಅರಿಯಲೇಬೇಕು.ನೀರನ್ನುಸಂರಕ್ಷಿಸಬೇಕು. ಶುದ್ಧ ನೀರಿನ ಕಲುಷಿತಕ್ಕೆ ಮುಂದಾಗಬಾರದುಎಂದು ಕಾವೇರಿ ಕಿವಿಮಾತು ಹೇಳಿದರು.

ಜನಪ್ರತಿನಿಧಿಗಳಿದ್ದರೆ ಬೇರೆ ರೀತಿ: ಚುನಾವಣೆ ನೀತಿಸಂಹಿತೆ ಕಾರಣದಿಂದ ಭಗೀರಥ ಜಯಂತಿ ಸರಳವಾಗಿ ಜಿಲ್ಲಾಡಳಿತದಿಂದ ನಡೆಯುತ್ತಿದೆ. ಅಧಿಕಾರಿಗಳೇ ಭಾಷಣಕಾರರಾಗಿದ್ದೇವೆ. ಇದೇ ವೇದಿಕೆಯಲ್ಲಿ ಜನಪ್ರತಿನಿಧಿಗಳು, ಭಾಷಣಕಾರರು ಇದ್ದಿದ್ದರೆಬೇರೆ ರೀತಿಯಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಭಗೀರಥರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಸಮುದಾಯವು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಸೌಲಭ್ಯಗಳನ್ನು ಪಡೆಯಲು ಮುಂದೆ ಬರಬೇಕು. ಬಾಲ್ಯ ವಿವಾಹ ಸಂಪೂರ್ಣವಾಗಿ ನಿಲ್ಲಬೇಕು. ಮೌಢ್ಯ ತೊರೆಯಬೇಕು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT