<p><strong>ಚಾಮರಾಜನಗರ:</strong> ಕೊಳ್ಳೇಗಾಲ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಇರುವ ಪ್ರದೇಶಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ಕೊಟ್ಟು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.</p>.<p>ಕೋವಿಡ್–19 ಕಾರಣದಿಂದಾಗಿ ಈವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಜಲಪಾತ ಮೈದುಂಬಿ ಆಕರ್ಷಣೀಯವಾಗಿದ್ದು, ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.</p>.<p>ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ್ದ ಜಿಲ್ಲಾಧಿಕಾರಿ ಅವರು, ಪ್ರವಾಸಿಗರಿಗೆ ಅಗತ್ಯವಾದ ಮೂಲಸೌಕರ್ಯ ಹಾಗೂ ಕೋವಿಡ್ ತಡೆಗೆ ನಿಯಮ ಪಾಲನೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು.</p>.<p>ಉಪವಿಭಾಗಾಧಿಕಾರಿ ನಿಖಿತಾ ಎಂ.ಚಿನ್ನಸ್ವಾಮಿ ಅವರು ನೀಡಿರುವ ವರದಿಯ ಆಧಾರದಲ್ಲಿ ಪ್ರವಾಸಿ ತಾಣವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ ಎಂದು ಡಾ.ಎಂ.ಆರ್.ರವಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಅಗತ್ಯ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ, ಕೋವಿಡ್ ತಡೆಗಾಗಿ ಪ್ರವಾಸಿಗರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಲು ಬೇಕಾದ ವ್ಯವಸ್ಥೆ ಮಾಡಬೇಕು ಎಂದು ಅವರು ಆದೇಶದಲ್ಲಿ ಹೇಳಿದ್ದಾರೆ.</p>.<p class="Subhead">ದರ್ಗಾ ಭೇಟಿಗೂ ಅವಕಾಶ: ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಹಜರತ್ ಮರ್ದಾನೆ–ಎ–ಫೇಖ್ ದರ್ಗಾಕ್ಕೆ ಭಕ್ತರ ಭೇಟಿ ಹಾಗೂ ಪ್ರಾರ್ಥನೆ ಮಾಡುವುದಕ್ಕೆ ಹೇರಲಾಗಿದ್ದ ನಿರ್ಬಂಧವನ್ನು ತೆರೆವುಗೊಳಿಸಿ ಜಿಲ್ಲಾಧಿಕಾರಿ ಆದೇಶಹೊರಡಿಸಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುಂತೆಯೂ ಅವರು ಸೂಚಿಸಿದ್ದಾರೆ.</p>.<p class="Briefhead">ನಾಲ್ರೋಡ್, ಅರ್ಧನಾರೀಪುರ ಚೆಕ್ಪೋಸ್ಟ್ ತೆರವು</p>.<p>ಹನೂರು ತಾಲ್ಲೂಕಿನ ನಾಲ್ರೋಡ್ ಮತ್ತು ಅರ್ಧನಾರಿಪುರದದಲ್ಲಿ ಸ್ಥಾಪಿಸಲಾಗಿದ್ದ ಚೆಕ್ಪೋಸ್ಟ್ಗಳನ್ನು ತೆರವುಗೊಳಿಸಿ, ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.<br /><br />ತಮಿಳುನಾಡಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದ ಕಾರಣಕ್ಕೆ ಈ ಎರಡು ಚೆಕ್ಪೋಸ್ಟ್ಗಳಲ್ಲಿ ವಾಹನ ಮತ್ತು ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿತ್ತು.</p>.<p>ಜಿಲ್ಲೆಯ ಆರ್ಥಿಕ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಚೆಕ್ಪೋಸ್ಟ್ಗಳನ್ನು ತೆರವುಗೊಳಿಸುವುದರ ಬಗ್ಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದರಿಂದ ಹನೂರು ತಾಲ್ಲುಕು ತಹಶೀಲ್ದಾರ್ ಹಾಗೂ ಚೆಕ್ಪೋಸ್ಟ್ ನೋಡೆಲ್ ಅಧಿಕಾರಿಗಳ ವರದಿ ಆಧರಿಸಿ ಚೆಕ್ಪೋಸ್ಟ್ಗಳನ್ನು ತೆರವುಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕೊಳ್ಳೇಗಾಲ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಇರುವ ಪ್ರದೇಶಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ಕೊಟ್ಟು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.</p>.<p>ಕೋವಿಡ್–19 ಕಾರಣದಿಂದಾಗಿ ಈವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಜಲಪಾತ ಮೈದುಂಬಿ ಆಕರ್ಷಣೀಯವಾಗಿದ್ದು, ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.</p>.<p>ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ್ದ ಜಿಲ್ಲಾಧಿಕಾರಿ ಅವರು, ಪ್ರವಾಸಿಗರಿಗೆ ಅಗತ್ಯವಾದ ಮೂಲಸೌಕರ್ಯ ಹಾಗೂ ಕೋವಿಡ್ ತಡೆಗೆ ನಿಯಮ ಪಾಲನೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು.</p>.<p>ಉಪವಿಭಾಗಾಧಿಕಾರಿ ನಿಖಿತಾ ಎಂ.ಚಿನ್ನಸ್ವಾಮಿ ಅವರು ನೀಡಿರುವ ವರದಿಯ ಆಧಾರದಲ್ಲಿ ಪ್ರವಾಸಿ ತಾಣವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ ಎಂದು ಡಾ.ಎಂ.ಆರ್.ರವಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಅಗತ್ಯ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ, ಕೋವಿಡ್ ತಡೆಗಾಗಿ ಪ್ರವಾಸಿಗರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಲು ಬೇಕಾದ ವ್ಯವಸ್ಥೆ ಮಾಡಬೇಕು ಎಂದು ಅವರು ಆದೇಶದಲ್ಲಿ ಹೇಳಿದ್ದಾರೆ.</p>.<p class="Subhead">ದರ್ಗಾ ಭೇಟಿಗೂ ಅವಕಾಶ: ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಹಜರತ್ ಮರ್ದಾನೆ–ಎ–ಫೇಖ್ ದರ್ಗಾಕ್ಕೆ ಭಕ್ತರ ಭೇಟಿ ಹಾಗೂ ಪ್ರಾರ್ಥನೆ ಮಾಡುವುದಕ್ಕೆ ಹೇರಲಾಗಿದ್ದ ನಿರ್ಬಂಧವನ್ನು ತೆರೆವುಗೊಳಿಸಿ ಜಿಲ್ಲಾಧಿಕಾರಿ ಆದೇಶಹೊರಡಿಸಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುಂತೆಯೂ ಅವರು ಸೂಚಿಸಿದ್ದಾರೆ.</p>.<p class="Briefhead">ನಾಲ್ರೋಡ್, ಅರ್ಧನಾರೀಪುರ ಚೆಕ್ಪೋಸ್ಟ್ ತೆರವು</p>.<p>ಹನೂರು ತಾಲ್ಲೂಕಿನ ನಾಲ್ರೋಡ್ ಮತ್ತು ಅರ್ಧನಾರಿಪುರದದಲ್ಲಿ ಸ್ಥಾಪಿಸಲಾಗಿದ್ದ ಚೆಕ್ಪೋಸ್ಟ್ಗಳನ್ನು ತೆರವುಗೊಳಿಸಿ, ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.<br /><br />ತಮಿಳುನಾಡಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದ ಕಾರಣಕ್ಕೆ ಈ ಎರಡು ಚೆಕ್ಪೋಸ್ಟ್ಗಳಲ್ಲಿ ವಾಹನ ಮತ್ತು ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿತ್ತು.</p>.<p>ಜಿಲ್ಲೆಯ ಆರ್ಥಿಕ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಚೆಕ್ಪೋಸ್ಟ್ಗಳನ್ನು ತೆರವುಗೊಳಿಸುವುದರ ಬಗ್ಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದರಿಂದ ಹನೂರು ತಾಲ್ಲುಕು ತಹಶೀಲ್ದಾರ್ ಹಾಗೂ ಚೆಕ್ಪೋಸ್ಟ್ ನೋಡೆಲ್ ಅಧಿಕಾರಿಗಳ ವರದಿ ಆಧರಿಸಿ ಚೆಕ್ಪೋಸ್ಟ್ಗಳನ್ನು ತೆರವುಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>