ಕೋವಿಡ್–19 ಕಾರಣದಿಂದ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಈಗ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಭೇಟಿಗೆ ಅವಕಾಶ ನೀಡಲಾಗಿದೆ. ಮೊದಲನೆಯ ದಿನವಾಗಿದ್ದರಿಂದ ಪ್ರವಾಸಿಗರ ಸಂಖ್ಯೆ ಸ್ವಲ್ಪ ಕಡಿಮೆ ಇತ್ತು. ಹಾಗಿದ್ದರೂ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ದೂರದ ಊರುಗಳಿಂದ ಪ್ರವಾಸಿಗರು ಬಂದಿದ್ದರು. ಜಿಲ್ಲೆಯವರು ಕೂಡ ಜಲಪಾತವನ್ನು ವೀಕ್ಷಿಸಿದರು.