ಚಾಮರಾಜನಗರ: ನಗರದ ಶ್ರೀ ವಿದ್ಯಾಗಣಪತಿ ಮಂಡಳಿಯ ಈ ಬಾರಿಯ ಗಣೇಶ ಹಬ್ಬಕ್ಕೆ ಪ್ರತಿಷ್ಠಾಪಿಸಿದ್ದ ಭೂ ಮಂಡಲ ರಕ್ಷ ಗಣಪತಿ ವಿಸರ್ಜನೆ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.
ಸೆ.20ರಂದು ವಿಸರ್ಜನಾ ಕಾರ್ಯಕ್ರಮ ನಡೆಯಬೇಕಿತ್ತು. ಜಿಲ್ಲಾಡಳಿತ ವು ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೆರವಣಿಗೆ ಆರಂಭವಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.