ಚಾಮರಾಜನಗರ: ಜಿಲ್ಲೆಯ ಅಭಿವೃದ್ದಿಗಾಗಿ ಸರ್ಕಾರದ ಗಮನ ಸೆಳೆಯಲು ಇದೇ 25 ರಂದು ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಪಕ್ಷದ ಮುಖಂಡರೊಂದಿಗೆ ಮಾತನಾಡಿದ ಅವರು, ‘ಎಲ್ಲ ಸರ್ಕಾರಗಳೂ ಜಿಲ್ಲೆಯನ್ನು ಕಡೆಗಣಿಸಿವೆ. ‘ಚಾಮರಾಜನಗರ ಶಾಪಗ್ರಸ್ತ ಜಿಲ್ಲೆ. ಅಲ್ಲಿಗೆ ಹೋದರೆ ಅಧಿಕಾರ ಹೋಗುತ್ತದೆ’ ಎಂದು ತಪ್ಪು ಸಂದೇಶ ಹುಟ್ಟುಹಾಕಿದ್ದಾರೆ’ ಎಂದು ದೂರಿದರು.
‘ಚಾಮರಾಜನಗರ ಅಭಿವೃದ್ದಿಗೆ ಸರ್ಕಾರದ ಗಮನ ಸೆಳೆಯಲು 25ರಂದು ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಬೈಕ್ ರ್ಯಾಲಿಗೆ ಚಾಲನೆ ನೀಡಿ ನಂತರ ನಗರ ಪ್ರಮುಖ ಬೀದಿ ಸಂಚರಿಸಲಿದೆ’ ಎಂದರು.