ಬಸವಣ್ಣ ಅವರು ರಾತ್ರಿ ಸ್ವಗ್ರಾಮ ಬಸವಾಪುರಕ್ಕೆ ಬೈಕ್ನಲ್ಲಿ ಹೋಗುತ್ತಿದ್ದಾಗ, ಸೋಮವಾರಪೇಟೆಯ ಬಳಿಯ ಪೆಟ್ರೋಲ್ ಬಂಕ್ ಎದುರು ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದರು. ತಲೆ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ. ಸಂಚಾರ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು, ಲಾರಿಯನ್ನು ಜಪ್ತಿ ಮಾಡಿದ್ದಾರೆ.