<p><strong>ಯಳಂದೂರು:</strong> ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯದಲ್ಲಿ ಬುಧವಾರ ಗೋಲಕ ಹಣದ ಎಣಿಕೆ ನಡೆಯಿತು.</p>.<p>ಒಟ್ಟು ₹35,79,180 ಸಂಗ್ರಹವಾಗಿದ್ದು, ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ದೇವಾಲಯದ ಖಾತೆಗೆ ಜಮೆ ಮಾಡಲಾಯಿತು. </p>.<p>ಹುಂಡಿ ಎಣಿಕೆ ಕಾರ್ಯ ಬೆಳಿಗ್ಗೆಯಿಂದ ಸಂಜೆವರೆಗೆ ನಡೆಯಿತು. ಸಾಮಾನ್ಯವಾಗಿ ಮೂರು ಹಂತದಲ್ಲಿ ಮೌಲ್ಯಮಾಪನ ನಡೆಯುತ್ತದೆ. ನೋಟು ಮತ್ತು ನಾಣ್ಯ ಮೊದಲ ಹಂತ, ನಂತರ ಆಭರಣಗಳನ್ನು ಸಂಗ್ರಹಿಸಲಾಗುತ್ತದೆ ಎಣಿಕೆ ಕಾರ್ಯದಲ್ಲಿ 30ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು.</p>.<p>‘ಎಣಿಕೆ ಸಂದರ್ಭ ಬೊಟ್ಟು ತಾಳಿ 9 ಮತ್ತು 8 ಬೆಳ್ಳಿ ಪದಾರ್ಥ ಕಂಡು ಬಂದಿದ್ದು, ಈ ಬಾರಿ ವಿದೇಶಿ ನೋಟುಗಳು ಇರುವುದಿಲ್ಲ’ ಎಂದು ಇಒ ವೈ.ಎನ್.ಮೋಹನ್ ಕುಮಾರ್ ಹೇಳಿದರು.</p>.<p>ತಹಶೀಲ್ದಾರ್ ಆರ್.ಜಯಪ್ರಕಾಶ್, ಉಪ ತಹಶೀಲ್ದಾರ್ ಶಿವರಾಜು, ಶಿರಸ್ತೇದಾರ್ ಶಾಂತಿ, ಮೋಹನ್ ಕುಮಾರ್, ದೇವಾಲಯದ ಪಾರುಪತ್ತೆಗಾರ ರಾಜು, ಶೇಷಾದ್ರಿ, ಕರ್ನಾಟಕ ಗ್ರಾಮೀಣ ಬ್ಯಾಂಕ್, ಪೊಲೀಸ್ ಮತ್ತು ಮುಜರಾಯಿ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯದಲ್ಲಿ ಬುಧವಾರ ಗೋಲಕ ಹಣದ ಎಣಿಕೆ ನಡೆಯಿತು.</p>.<p>ಒಟ್ಟು ₹35,79,180 ಸಂಗ್ರಹವಾಗಿದ್ದು, ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ದೇವಾಲಯದ ಖಾತೆಗೆ ಜಮೆ ಮಾಡಲಾಯಿತು. </p>.<p>ಹುಂಡಿ ಎಣಿಕೆ ಕಾರ್ಯ ಬೆಳಿಗ್ಗೆಯಿಂದ ಸಂಜೆವರೆಗೆ ನಡೆಯಿತು. ಸಾಮಾನ್ಯವಾಗಿ ಮೂರು ಹಂತದಲ್ಲಿ ಮೌಲ್ಯಮಾಪನ ನಡೆಯುತ್ತದೆ. ನೋಟು ಮತ್ತು ನಾಣ್ಯ ಮೊದಲ ಹಂತ, ನಂತರ ಆಭರಣಗಳನ್ನು ಸಂಗ್ರಹಿಸಲಾಗುತ್ತದೆ ಎಣಿಕೆ ಕಾರ್ಯದಲ್ಲಿ 30ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು.</p>.<p>‘ಎಣಿಕೆ ಸಂದರ್ಭ ಬೊಟ್ಟು ತಾಳಿ 9 ಮತ್ತು 8 ಬೆಳ್ಳಿ ಪದಾರ್ಥ ಕಂಡು ಬಂದಿದ್ದು, ಈ ಬಾರಿ ವಿದೇಶಿ ನೋಟುಗಳು ಇರುವುದಿಲ್ಲ’ ಎಂದು ಇಒ ವೈ.ಎನ್.ಮೋಹನ್ ಕುಮಾರ್ ಹೇಳಿದರು.</p>.<p>ತಹಶೀಲ್ದಾರ್ ಆರ್.ಜಯಪ್ರಕಾಶ್, ಉಪ ತಹಶೀಲ್ದಾರ್ ಶಿವರಾಜು, ಶಿರಸ್ತೇದಾರ್ ಶಾಂತಿ, ಮೋಹನ್ ಕುಮಾರ್, ದೇವಾಲಯದ ಪಾರುಪತ್ತೆಗಾರ ರಾಜು, ಶೇಷಾದ್ರಿ, ಕರ್ನಾಟಕ ಗ್ರಾಮೀಣ ಬ್ಯಾಂಕ್, ಪೊಲೀಸ್ ಮತ್ತು ಮುಜರಾಯಿ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>