ಹಕ್ಕಿಜ್ವರ: ಚಾಮರಾಜನಗರ ಜಿಲ್ಲೆಯಲ್ಲೂ ಕಟ್ಟೆಚ್ಚರ

ಚಾಮರಾಜನಗರ: ಕೇರಳದಲ್ಲಿ ಹಕ್ಕಿ ಜ್ವರ ಕಂಡು ಬಂದಿರುವ ಕಾರಣದಿಂದ ಜಿಲ್ಲೆಯಲ್ಲೂ ಪಶುಪಾಲನೆ ಹಾಗೂ ವೈದ್ಯಕೀಯ ಸೇವೆಗಳ ಇಲಾಖೆ ಕಟ್ಟೆಚ್ಚರ ಕೈಗೊಂಡಿದೆ.
ಗುಂಡ್ಲುಪೇಟೆ ತಾಲ್ಲೂಕು ಕೇರಳದೊಂದಿಗೆ ಗಡಿಯನ್ನು ಹಂಚಿಕೊಂಡಿದ್ದು, ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪಶುಪಾಲನೆ ಇಲಾಖೆಯ ಸಿಬ್ಬಂದಿಯನ್ನು ಮಂಗಳವಾರ ಬೆಳಿಗ್ಗೆಯಿಂದಲೇ ನಿಯೋಜಿಸಲಾಗಿದೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಪಶುಪಾಲನೆ ಇಲಾಖೆ ಉಪನಿರ್ದೇಶಕ ಡಾ.ಸಿ.ವೀರಭದ್ರಯ್ಯ ಅವರು, ‘ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಿದ್ದೇವೆ. ಕೇರಳದಿಂದ ನಮ್ಮ ಜಿಲ್ಲೆಗೆ ಕೋಳಿಗಳನ್ನು ಸಾಗಣೆ ಮಾಡುವುದಿಲ್ಲ. ನಮ್ಮಲ್ಲಿಂದಲೇ ಅಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಕೇರಳ ಸರ್ಕಾರ ಕೋಳಿ ಸಾಗಣೆಗೆ ನಿರ್ಬಂಧ ವಿಧಿಸಿರುವುದರಿಂದ ಎರಡು ದಿನಗಳಿಂದ ಕೋಳಿಗಳನ್ನು ಸಾಗಿಸುವ ವಾಹನ ಸಂಚರಿಸಿಲ್ಲ. ಅಲ್ಲಿಂದ ಬರುವ ವಾಹನಗಳನ್ನು ಸ್ಯಾನಿಟೈಸ್ ಮಾಡಲು ವ್ಯವಸ್ಥೆ ಮಾಡಲಾಗಿದೆ’ ಎಂದರು.
ಇದನ್ನೂ ಓದಿ: ಕೇರಳದಲ್ಲಿ ಹಕ್ಕಿಜ್ವರ: ಕೊಡಗು ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕೆಗೆ ಸೂಚನೆ
‘ಜಿಲ್ಲೆಯಲ್ಲಿ ಕೋಳಿ ಅಥವಾ ಇತರ ಹಕ್ಕಿಗಳು ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿಲ್ಲ. ಹಾಗಾಗಿ ಜನರು ಆತಂಕ ಪಡಬೇಕಾಗಿಲ್ಲ’ ಎಂದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.