ಈಗಾಗಲೇ ರಂಗನತಿಟ್ಟು, ದಾಂಡೇಲಿ, ಬಳ್ಳಾರಿ, ಮಂಗಳೂರು, ಚಿಕ್ಕಬಳ್ಳಾಪುರ, ಕಾರವಾರಗಳಲ್ಲಿ ಹಕ್ಕಿ ಹಬ್ಬ ನಡೆದಿವೆ. ಜಿಲ್ಲೆಯಲ್ಲಿ ನಡೆಯುತ್ತಿರುವುದು ಇದೇ ಮೊದಲು. ಮೂರು ದಿನಗಳಕಾರ್ಯಕ್ರಮದಲ್ಲಿ ಪಕ್ಷಿಗಳ ಬಗ್ಗೆ ಸಂವಾದ, ಉಪನ್ಯಾಸ ಹಾಗೂ ಅರಣ್ಯದ ವಿವಿಧ ಕಡೆಗಳಲ್ಲಿ ಹಕ್ಕಿಗಳ ವೀಕ್ಷಣೆಗೆ ಅವಕಾಶ ಇರಲಿದೆ. ರಾಜ್ಯ ಹಾಗೂ ಹೊರ ರಾಜ್ಯಗಳ ಪಕ್ಷಿ ವೀಕ್ಷಕರು, ಸಂಶೋಧಕರು, ಛಾಯಾಗ್ರಾಹಕರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.