<p><strong>ಚಾಮರಾಜನಗರ: ‘</strong>ಆದಿವಾಸಿಗಳ ಹಕ್ಕುಗಳ ರಕ್ಷಣೆಗೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಬಿರ್ಸಾ ಮುಂಡ ಆದರ್ಶ ಮತ್ತು ಚಿಂತನೆಗಳು ಆದಿವಾಸಿ ಸಮುದಾಯಗಳಿಗೆ ಸ್ಫೂರ್ತಿಯಾಗಬೇಕು’ ಎಂದು ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಮಾದೇಗೌಡ ತಿಳಿಸಿದರು.</p>.<p>ತಾಲ್ಲೂಕಿನ ಕುಳ್ಳೂರು ಗ್ರಾಮದಲ್ಲಿ ಸೋಲಿಗ ಅಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಬಿರ್ಸಾ ಮುಂಡ 150ನೇ ಜಯಂತಿ ಕಾರ್ಯಕ್ರಮದಲ್ಲಿ ಬಿರ್ಸಾ ಮುಂಡ ನಾಮಫಲಕ ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>‘ಶತಮಾನಗಳಿಂದ ಅರಣ್ಯದಲ್ಲಿ ವಾಸಿಸುತ್ತಿದ್ದ ಆದಿವಾಸಿಗಳ ಮೇಲೆ ಬ್ರಿಟಿಷರು ದೌರ್ಜನ್ಯ, ದಬ್ಬಾಳಿಕೆ ನಡೆಸಿದಾಗ ಅದರ ವಿರುದ್ಧ ದನಿ ಎತ್ತಿದ ಬಿರ್ಸಾ ಮುಂಡ ಆದಿವಾಸಿಗಳ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಗಾಗಿ ಹೋರಾಟ ಮಾಡಿದರು. ಬ್ರಿಟಿಷರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ ಬಿರ್ಸಾ ಮುಂಡ ಆದಿವಾಸಿ ಸಮಾಜಕ್ಕೆ ನ್ಯಾಯ ಕಲ್ಪಿಸಿಕೊಟ್ಟಿದ್ದಾರೆ. ಸಮುದಾಯದ ಪರವಾಗಿ ಪ್ರಾಣ ತ್ಯಾಗ ಮಾಡಿದ ಬಿರ್ಸಾ ಮುಂಡ ಅವರನ್ನು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು’ ಎಂದರು.</p>.<p>‘ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘವು 28 ವರ್ಷಗಳಿಂದ ಗಿರಿಜನರ ಶ್ರೇಯೋಭಿವೃದ್ಧಿಗಾಗಿ ಹಲವು ಹೋರಾಟ ಮತ್ತು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಆದರೂ ಆಳುವ ಸರ್ಕಾರಗಳು ಆದಿವಾಸಿ ವಿರೋಧಿ ಧೋರಣೆಗಳನ್ನು ಪ್ರದರ್ಶಿಸುತ್ತಲೇ ಬಂದಿವೆ. ಕಾಡಿನೊಳಗೆ ನೆಲೆ ಕಂಡುಕೊಂಡಿರುವ ಗಿರಿಜನರನ್ನು ಒಕ್ಕಲೆಬ್ಬಿಸಲು ಸರ್ಕಾರ ಹುಲಿ ಯೋಜನೆ ಮತ್ತು ವನ್ಯಜೀವಿ ಧಾಮವಾಗಿ ಘೋಷಣೆ ಮಾಡುವ ಮೂಲಕ ತೊಂದರೆ ನೀಡುತ್ತಿದೆ. ಸರ್ಕಾರದ ನೀತಿಗಳ ವಿರುದ್ಧ ಪ್ರತಿಯೊಬ್ಬರೂ ಸಂಘಟಿತರಾಗಿ ಹೋರಾಟ ಮಾಡಬೇಕಾಗಿದೆ’ ಎಂದು ಕರೆ ನೀಡಿದರು.</p>.<p>‘ಗಿರಿಜನರ ಜೀವನಶೈಲಿ ಈಚೆಗೆ ಬದಲಾಗುತ್ತಿದ್ದು , ದುಶ್ಚಟಗಳು ಹೆಚ್ಚಾಗುತ್ತಿವೆ. ರೋಗ ರುಜಿನಗಳಿಗೆ ಆದಿವಾಸಿಗಳು ಬಲಿಯಾಗುತ್ತಿದ್ದಾರೆ. ಗಿರಿಜನರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಹೆಚ್ಚಿನ ಆಸಕ್ತಿ ತೋರಬೇಕು, ದುಶ್ಚಟಗಳಿಂದ ದೂರ ಇರಬೇಕು’ ಎಂದು ಸಲಹೆ ನೀಡಿದರು.</p>.<p>ಅರಣ್ಯ ಹಕ್ಕು ಸಮಿತಿ ಸದಸ್ಯೆ ಪುಟ್ಟಮ್ಮ ಮಾತನಾಡಿ, ‘ಆದಿವಾಸಿಗಳಿಗೆ ಸರ್ಕಾರ ಹಲವು ಸವಲತ್ತುಗಳನ್ನು ನೀಡುತ್ತಿದ್ದು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಮುದಾಯದಲ್ಲಿರುವ ಶಿಕ್ಷಣದ ಕೊರತೆಯೂ ಕಾರಣವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಸಮಾಜದ ಮುಖ್ಯವಾಹಿನಿಗೆ ತರಬೇಕು’ ಎಂದು ತಿಳಿಸಿದರು.</p>.<p>ಲ್ಯಾಂಪ್ಸ್ ಸಹಕಾರ ಸಂಘದ ಉಪಾಧ್ಯಕ್ಷ ಶಿವಣ್ಣ ಮಾತನಾಡಿ, ‘ಕುಳ್ಳೂರು ಗ್ರಾಮದಲ್ಲಿ ಆದಿವಾಸಿಗಳಿಗೆ ಸ್ಮಶಾನ ಹಾಗೂ ಸಮುದಾಯ ಭವನ ಇಲ್ಲದೆ ಸಮಸ್ಯೆ ಅನುಭವಿಸುವಂತಾಗಿದೆ. ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ. ಆದಿವಾಸಿಗಳಲ್ಲಿ ಸಂಘಟನೆಯ ಕೊರತೆ ಇರುವುದರಿಂದ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ಧೋರಣೆ ತಾಳಿದೆ. ಹಕ್ಕುಗಳಿಗಾಗಿ ಹೋರಾಟ ಮಾಡಬೇಕು’ ಎಂದರು. </p>.<p>ಗಿರಿಜನರು ಆಕರ್ಷಕವಾಗಿ ಗೋರುಕನ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಅಟ್ಟುಗೂಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ, ಲ್ಯಾಂಪ್ಸ್ ಸಹಕಾರ ಸಂಘದ ಉಪಾಧ್ಯಕ್ಷ ಶಿವಣ್ಣ, ಮುಖಂಡರಾದ ಸಣ್ಣಕ್ಕಿ ಗೌಡ, ಸಿ.ಮಹದೇವ, ಮಹದೇವಯ್ಯ, ಸ್ವಾಮಿ, ಸಣ್ಣೇಗೌಡ, ಚಂದ್ರಪ್ಪ, ಎಂ.ಲಿಂಗೇಗೌಡ, ಜಡೇಗೌಡ, ಆಲಮ್ಮ, ಕಮಲಮ್ಮ, ಸಾಕಮ್ಮ, ಹನೂರು ಲ್ಯಾಂಪ್ಸ್ ಸಂಘದ ಚಂದ್ರಯ್ಯ, ನಂಜೇಗೌಡ, ಹೊಸಪೋಡು ಮಾದೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: ‘</strong>ಆದಿವಾಸಿಗಳ ಹಕ್ಕುಗಳ ರಕ್ಷಣೆಗೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಬಿರ್ಸಾ ಮುಂಡ ಆದರ್ಶ ಮತ್ತು ಚಿಂತನೆಗಳು ಆದಿವಾಸಿ ಸಮುದಾಯಗಳಿಗೆ ಸ್ಫೂರ್ತಿಯಾಗಬೇಕು’ ಎಂದು ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಮಾದೇಗೌಡ ತಿಳಿಸಿದರು.</p>.<p>ತಾಲ್ಲೂಕಿನ ಕುಳ್ಳೂರು ಗ್ರಾಮದಲ್ಲಿ ಸೋಲಿಗ ಅಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಬಿರ್ಸಾ ಮುಂಡ 150ನೇ ಜಯಂತಿ ಕಾರ್ಯಕ್ರಮದಲ್ಲಿ ಬಿರ್ಸಾ ಮುಂಡ ನಾಮಫಲಕ ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>‘ಶತಮಾನಗಳಿಂದ ಅರಣ್ಯದಲ್ಲಿ ವಾಸಿಸುತ್ತಿದ್ದ ಆದಿವಾಸಿಗಳ ಮೇಲೆ ಬ್ರಿಟಿಷರು ದೌರ್ಜನ್ಯ, ದಬ್ಬಾಳಿಕೆ ನಡೆಸಿದಾಗ ಅದರ ವಿರುದ್ಧ ದನಿ ಎತ್ತಿದ ಬಿರ್ಸಾ ಮುಂಡ ಆದಿವಾಸಿಗಳ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಗಾಗಿ ಹೋರಾಟ ಮಾಡಿದರು. ಬ್ರಿಟಿಷರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ ಬಿರ್ಸಾ ಮುಂಡ ಆದಿವಾಸಿ ಸಮಾಜಕ್ಕೆ ನ್ಯಾಯ ಕಲ್ಪಿಸಿಕೊಟ್ಟಿದ್ದಾರೆ. ಸಮುದಾಯದ ಪರವಾಗಿ ಪ್ರಾಣ ತ್ಯಾಗ ಮಾಡಿದ ಬಿರ್ಸಾ ಮುಂಡ ಅವರನ್ನು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು’ ಎಂದರು.</p>.<p>‘ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘವು 28 ವರ್ಷಗಳಿಂದ ಗಿರಿಜನರ ಶ್ರೇಯೋಭಿವೃದ್ಧಿಗಾಗಿ ಹಲವು ಹೋರಾಟ ಮತ್ತು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಆದರೂ ಆಳುವ ಸರ್ಕಾರಗಳು ಆದಿವಾಸಿ ವಿರೋಧಿ ಧೋರಣೆಗಳನ್ನು ಪ್ರದರ್ಶಿಸುತ್ತಲೇ ಬಂದಿವೆ. ಕಾಡಿನೊಳಗೆ ನೆಲೆ ಕಂಡುಕೊಂಡಿರುವ ಗಿರಿಜನರನ್ನು ಒಕ್ಕಲೆಬ್ಬಿಸಲು ಸರ್ಕಾರ ಹುಲಿ ಯೋಜನೆ ಮತ್ತು ವನ್ಯಜೀವಿ ಧಾಮವಾಗಿ ಘೋಷಣೆ ಮಾಡುವ ಮೂಲಕ ತೊಂದರೆ ನೀಡುತ್ತಿದೆ. ಸರ್ಕಾರದ ನೀತಿಗಳ ವಿರುದ್ಧ ಪ್ರತಿಯೊಬ್ಬರೂ ಸಂಘಟಿತರಾಗಿ ಹೋರಾಟ ಮಾಡಬೇಕಾಗಿದೆ’ ಎಂದು ಕರೆ ನೀಡಿದರು.</p>.<p>‘ಗಿರಿಜನರ ಜೀವನಶೈಲಿ ಈಚೆಗೆ ಬದಲಾಗುತ್ತಿದ್ದು , ದುಶ್ಚಟಗಳು ಹೆಚ್ಚಾಗುತ್ತಿವೆ. ರೋಗ ರುಜಿನಗಳಿಗೆ ಆದಿವಾಸಿಗಳು ಬಲಿಯಾಗುತ್ತಿದ್ದಾರೆ. ಗಿರಿಜನರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಹೆಚ್ಚಿನ ಆಸಕ್ತಿ ತೋರಬೇಕು, ದುಶ್ಚಟಗಳಿಂದ ದೂರ ಇರಬೇಕು’ ಎಂದು ಸಲಹೆ ನೀಡಿದರು.</p>.<p>ಅರಣ್ಯ ಹಕ್ಕು ಸಮಿತಿ ಸದಸ್ಯೆ ಪುಟ್ಟಮ್ಮ ಮಾತನಾಡಿ, ‘ಆದಿವಾಸಿಗಳಿಗೆ ಸರ್ಕಾರ ಹಲವು ಸವಲತ್ತುಗಳನ್ನು ನೀಡುತ್ತಿದ್ದು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಮುದಾಯದಲ್ಲಿರುವ ಶಿಕ್ಷಣದ ಕೊರತೆಯೂ ಕಾರಣವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಸಮಾಜದ ಮುಖ್ಯವಾಹಿನಿಗೆ ತರಬೇಕು’ ಎಂದು ತಿಳಿಸಿದರು.</p>.<p>ಲ್ಯಾಂಪ್ಸ್ ಸಹಕಾರ ಸಂಘದ ಉಪಾಧ್ಯಕ್ಷ ಶಿವಣ್ಣ ಮಾತನಾಡಿ, ‘ಕುಳ್ಳೂರು ಗ್ರಾಮದಲ್ಲಿ ಆದಿವಾಸಿಗಳಿಗೆ ಸ್ಮಶಾನ ಹಾಗೂ ಸಮುದಾಯ ಭವನ ಇಲ್ಲದೆ ಸಮಸ್ಯೆ ಅನುಭವಿಸುವಂತಾಗಿದೆ. ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ. ಆದಿವಾಸಿಗಳಲ್ಲಿ ಸಂಘಟನೆಯ ಕೊರತೆ ಇರುವುದರಿಂದ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ಧೋರಣೆ ತಾಳಿದೆ. ಹಕ್ಕುಗಳಿಗಾಗಿ ಹೋರಾಟ ಮಾಡಬೇಕು’ ಎಂದರು. </p>.<p>ಗಿರಿಜನರು ಆಕರ್ಷಕವಾಗಿ ಗೋರುಕನ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಅಟ್ಟುಗೂಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ, ಲ್ಯಾಂಪ್ಸ್ ಸಹಕಾರ ಸಂಘದ ಉಪಾಧ್ಯಕ್ಷ ಶಿವಣ್ಣ, ಮುಖಂಡರಾದ ಸಣ್ಣಕ್ಕಿ ಗೌಡ, ಸಿ.ಮಹದೇವ, ಮಹದೇವಯ್ಯ, ಸ್ವಾಮಿ, ಸಣ್ಣೇಗೌಡ, ಚಂದ್ರಪ್ಪ, ಎಂ.ಲಿಂಗೇಗೌಡ, ಜಡೇಗೌಡ, ಆಲಮ್ಮ, ಕಮಲಮ್ಮ, ಸಾಕಮ್ಮ, ಹನೂರು ಲ್ಯಾಂಪ್ಸ್ ಸಂಘದ ಚಂದ್ರಯ್ಯ, ನಂಜೇಗೌಡ, ಹೊಸಪೋಡು ಮಾದೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>