<p>ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ಸರ್ಕಲ್ನಲ್ಲಿ ಡಾ. ಶಿವಕುಮಾರ್ ಸ್ವಾಮೀಜಿ ಜನ್ಮ ದಿನೋತ್ಸವವನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಅನ್ನದಾನ ಸಹ ಏರ್ಪಡಿಸಲಾಗಿತ್ತು.</p>.<p>ಡಾ.ಶಿವಕುಮಾರ್ ಸ್ವಾಮೀಜಿ ಯುವಕರ ಬಳಗದ ವತಿಯಿಂದ ಏರ್ಪಡಿಸಿದ್ದ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಜಯಕುಮಾರ್ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.</p>.<p>ನಂತರ ಮಾತನಾಡಿ, ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಶಿವಕುಮಾರ್ ಸ್ವಾಮೀಜಿ ದಾಸೋಹದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಸರಳ ಜೀವನ ಕ್ರಮವನ್ನು ಪ್ರತಿಯೊಬ್ಬರು ಅನುಸರಿಸುವ ಮೂಲಕ ಪ್ರತಿಯೊಬ್ಬರೂ ಸನ್ಮಾರ್ಗದಲ್ಲಿ ನಡೆಯಬೇಕೆಂದು ಸಲಹೆ ನೀಡಿದರು.</p>.<p>ಪುರಸಭೆ ಸದಸ್ಯ ಶಶಿಧರ್ ದೀಪು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಲೀಂ ಪಾಷಾ, ಶಬರೀಶ್, ಸಚಿನ್, ನಮೋ ಮಂಜು, ಶಿಂಡನಪುರ ಶಿವಕುಮಾರ್, ಅಕ್ಷಯ್, ಶಶಾಂಕ್, ಹರೀಶ್, ಅಭಿ, ಶಾಂತಪ್ಪ ದೊಡ್ಡತುಪ್ಪೂರು, ಕಾನ್ಸ್ಟೆಬಲ್ಗಳಾದ ಮಹೇಶ್, ನಟೇಶ್, ಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ಸರ್ಕಲ್ನಲ್ಲಿ ಡಾ. ಶಿವಕುಮಾರ್ ಸ್ವಾಮೀಜಿ ಜನ್ಮ ದಿನೋತ್ಸವವನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಅನ್ನದಾನ ಸಹ ಏರ್ಪಡಿಸಲಾಗಿತ್ತು.</p>.<p>ಡಾ.ಶಿವಕುಮಾರ್ ಸ್ವಾಮೀಜಿ ಯುವಕರ ಬಳಗದ ವತಿಯಿಂದ ಏರ್ಪಡಿಸಿದ್ದ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಜಯಕುಮಾರ್ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.</p>.<p>ನಂತರ ಮಾತನಾಡಿ, ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಶಿವಕುಮಾರ್ ಸ್ವಾಮೀಜಿ ದಾಸೋಹದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಸರಳ ಜೀವನ ಕ್ರಮವನ್ನು ಪ್ರತಿಯೊಬ್ಬರು ಅನುಸರಿಸುವ ಮೂಲಕ ಪ್ರತಿಯೊಬ್ಬರೂ ಸನ್ಮಾರ್ಗದಲ್ಲಿ ನಡೆಯಬೇಕೆಂದು ಸಲಹೆ ನೀಡಿದರು.</p>.<p>ಪುರಸಭೆ ಸದಸ್ಯ ಶಶಿಧರ್ ದೀಪು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಲೀಂ ಪಾಷಾ, ಶಬರೀಶ್, ಸಚಿನ್, ನಮೋ ಮಂಜು, ಶಿಂಡನಪುರ ಶಿವಕುಮಾರ್, ಅಕ್ಷಯ್, ಶಶಾಂಕ್, ಹರೀಶ್, ಅಭಿ, ಶಾಂತಪ್ಪ ದೊಡ್ಡತುಪ್ಪೂರು, ಕಾನ್ಸ್ಟೆಬಲ್ಗಳಾದ ಮಹೇಶ್, ನಟೇಶ್, ಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>