ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಬ್ಯಾನರ್ ಬಳಕೆ

ಕಾಂಗ್ರೆಸ್ ಜನಪ್ರತಿನಿಧಿಗಳ ಆಕ್ರೋಶ
Last Updated 26 ನವೆಂಬರ್ 2020, 13:29 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಐದು ಕೆರೆಗಳಿಗೆ ನೀರು ತುಂಬಿಸುವ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಚಿಹ್ನೆ ಇರುವ ಬ್ಯಾನರ್ ಹಾಕಿದ್ದಕ್ಕೆ ಕಾಂಗ್ರೆಸ್ ಜನಪ್ರತಿನಿಧಿಗಳು ವೇದಿಕೆಗೆ ಹೋಗಲು ನಿರಾಕರಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಘವಾಪುರ ಕೆರೆ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಘಟನೆ ನಡೆಯಿತು.

ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಅಶ್ವಿನಿ ವಿಶ್ವನಾಥ್, ಉಪಾಧ್ಯಕ್ಷೆ ಶಶಿಕಲಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಧುಶಂಕರ್, ಉಪಾಧ್ಯಕ್ಷೆ ಸುಮಿತ್ರಾ ಮಹೇಶ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಕಾರ್ಯಕ್ರಮದಿಂದ ಹೊರ ನಡೆಯುವುದಾಗಿ ತಿಳಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಹಾಗೂ ಶಾಸಕ ಸಿ.ಎಸ್.ನಿರಂಜನ ಕುಮಾರ್ ಎದುರಲ್ಲೆ ಬ್ಯಾನರ್ ತೆಗೆಯಲಾಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಧುಂಕರ್ ಮಾತನಾಡಿ, ‘ಸರ್ಕಾರಿ ಕಾರ್ಯಕ್ರಮಕ್ಕೆ ಬಿಜೆಪಿ ಚಿಹ್ನೆ ಇರುವ ಬ್ಯಾನರ್ ಹಾಕಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT