‘ಕೆಕ್ಕನಹಳ್ಳ ಚೆಕ್ಪೋಸ್ಟ್ನಿಂದ ಮೇಲುಕಾಮನಹಳ್ಳಿ ಚೆಕ್ಪೋಸ್ಟ್ ನಡುವೆ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ, ಶಾಸಕರಾದ ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ ಹಾಗೂ ಇತರರು ಅರಣ್ಯ ವ್ಯಾಪ್ತಿಯಲ್ಲಿ ಕಾದು ಕುಳಿತು, ವಾಹನದಿಂದ ಇಳಿದು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದ್ದಾರೆ. ಇದು ಅರಣ್ಯದ ನಿಯಮಗಳ ಉಲ್ಲಂಘನೆಯಾಗಿದೆ. ಹಾಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.